ಗ್ರಾಮ ದತ್ತು ಪಡೆದ ಸಿನಿಮಾ ತಂಡ

ಬಾಗಲಕೋಟೆ: ಸಿನಿಮಾ ತಂಡವೊಂದು ಜಿಲ್ಲೆಯ ಬಾದಾಮಿ ತಾಲೂಕಿನ ಕರ್ಲಕೊಪ್ಪ ಗ್ರಾಮವನ್ನು ದತ್ತು ಪಡೆದುಕೊಂಡು ಮಾದರಿಯನ್ನಾಗಿ ಮಾಡಲು ಮುಂದಾಗಿದೆ.

‘ಥರ್ಡ್ ಕ್ಲಾಸ್’ ಸಿನಿಮಾದ ನಾಯಕ ಜಗದೀಶ್ ಗ್ರಾಮವನ್ನು ದತ್ತು ಪಡೆದುಕೊಂಡಿದ್ದಾರೆ. ಇವರಿಗೆ ಸಿನಿಮಾ ತಂಡ ಕೂಡ ಸಾಥ್ ನೀಡಿದೆ. ಇತ್ತೀಚೆಗೆ ಮಲ್ಲಪ್ರಭಾ ನದಿಯ ಪ್ರವಾಹದಿಂದ ಹಾನಿಯಾಗಿದ್ದ ಕರ್ಲಕೊಪ್ಪ ಗ್ರಾಮದಲ್ಲಿ ಶಾಲೆಯ ಕಟ್ಟಡ ಸೇರಿದಂತೆ, ರಸ್ತೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲು ಈ ಸಿನಿಮಾ ತಂಡ ಮುಂದಾಗಿದೆ.

ಈ ಹಿನ್ನೆಲೆಯಲ್ಲಿ ಬಾಗಲಕೋಟೆ ನಗರಕ್ಕೆ ಸಿನಿಮಾ ಪ್ರಚಾರಕ್ಕೆ ಆಗಮಿಸಿದ ಚಿತ್ರದ ನಾಯಕ ನಮ್ಮ ಜಗದೀಶ್ ಹಾಗೂ ನಟಿ ರೂಪಿಕಾ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಪ್ರವಾಹದಿಂದ ಹಾನಿಯಾದ ಮಕ್ಕಳಿಗೆ ನಮ್ಮ ಕೈಲಾದಷ್ಟು ಸಹಾಯ ಮಾಡುತ್ತೇವೆ. ಸಿನಿಮಾ ತಂಡ ಗ್ರಾಮ ವಾಸ್ತವ್ಯ ಮಾಡಿ, ಜಾಗೃತಿ ಮೂಡಿಸುವ ಜೊತೆಗೆ ವಿವಿಧ ಬಗೆಯ ಅಭಿವೃದ್ಧಿ ಕಾರ್ಯಗಳಿಂದ ಸಮಾಜ ಸುಧಾರಣೆ ಮಾಡಲು ಮುಂದಾಗಿದ್ದಾರೆ.

Comments

Leave a Reply

Your email address will not be published. Required fields are marked *