ಸಿಎಂ ಸಿದ್ದರಾಮಯ್ಯರಿಗಿಂತ ಪಂಚಾಯತ್ ಅಧ್ಯಕ್ಷನೇ ವಾಸಿ: ಡಿವಿ ಸದಾನಂದ ಗೌಡ

ಉಡುಪಿ: ಸಿಎಂ ಸಿದ್ದರಾಮಯ್ಯರಿಗಿಂತ ಗ್ರಾಮ ಪಂಚಾಯತ್ ಅಧ್ಯಕ್ಷ ಚೆನ್ನಾಗಿ ಕೆಲಸ ಮಾಡುತ್ತಾನೆ. ಸಿದ್ದರಾಮಯ್ಯ ಅವರಿಗೆ ಸಿಎಂ ಅನ್ನೋ ಪರಿಜ್ಞಾನನೇ ಇಲ್ಲ ಎಂದು ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಖಾತೆಯ ಸಚಿವ ಡಿವಿ ಸದಾನಂದ ಗೌಡ ಅವರು ವ್ಯಂಗ್ಯವಾಡಿದ್ದಾರೆ.

ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಂಗಳೂರು ಚಲೋಗೆ ಸರ್ಕಾರ ಅಡ್ಡಿ ಪಡಿಸಿದ್ದು ಸರಿಯಲ್ಲ. ರಾಜ್ಯದಲ್ಲಿ ದಯನೀಯ ಪರಿಸ್ಥಿತಿ ಬಂದಿದೆ. ಪ್ರತಿಭಟನೆ ಮಾಡುವ ಹಕ್ಕು ಸರ್ಕಾರ ಕಿತ್ತುಕೊಂಡಿದೆ. ಬೆದರಿಕೆ ತಂತ್ರ ಮುಖ್ಯಮಂತ್ರಿಗೆ ಶೋಭೆ ತರುವುದಿಲ್ಲ ಎಂದರು.

ಬಿಜೆಪಿಯ ಹೋರಾಟದಿಂದ ಸಿದ್ದರಾಮಯ್ಯ ಅವರು ತತ್ತರಿಸಿ ಹೋಗಿದ್ದಾರೆ. ಬಣ್ಣ ಬಯಲಾಗುತ್ತದೆ ಎಂದು ಭಯಗೊಂಡಿದ್ದಾರೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರದಲ್ಲಿ ಸತ್ಯಾಂಶ ಹೊರಗೆ ಬರಬೇಕು ಅಂದ್ರೆ ಈ ಪ್ರಕರಣ ಸಿಬಿಐಗೆ ಕೊಡಬೇಕು. ಕರ್ನಾಟಕ ರಾಜ್ಯದ ಪೊಲೀಸರ ಮೇಲೆ ನಮಗೆ ನಂಬಿಕೆಯಿದೆ ಆದರೆ ರಾಜ್ಯ ಸರ್ಕಾರ, ಗೃಹ ಇಲಾಖೆ ಮೇಲೆ ನಂಬಿಕೆಯಿಲ್ಲ ಎಂದು ಹೇಳಿದರು.

ಗೃಹ ಇಲಾಖೆಯ ಸಲಹೆಗಾರ ಕೆಂಪಯ್ಯ ಹಿಡಿತದಲ್ಲೇ ಸಿಎಂ ಸಿದ್ದರಾಮಯ್ಯ ಇದ್ದಾರೆ. ಕೆಂಪಯ್ಯರನ್ನು ಹೊರಗೆ ಹಾಕಲು ಇಡೀ ಲೋಕವೇ ಹೇಳುತ್ತಿದೆ ಎಂದರು.

Comments

Leave a Reply

Your email address will not be published. Required fields are marked *