ನೀರಿನ ಮಧ್ಯೆ ನಿಂತು ಧ್ವಜಾರೋಹಣ ನೆರವೇರಿಸಿದ ಗ್ರಾಮಸ್ಥರು

ಮಡಿಕೇರಿ: ಇಂದು ನಾಡಿನಾದ್ಯಂತ ಸ್ವಾತಂತ್ರ್ಯ ದಿನವನ್ನು ಆಚರಿಸಲಾಗಿದೆ. ಕಳೆದ ಹಲವು ದಿನಗಳಿಂತ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಮಳೆ ನೀರನ ಮಧ್ಯೆಯೇ ಕೊಡಗಿನ ಗ್ರಾಮಸ್ಥರು ಧ್ವಜಾರೋಹಣ ನೆರವರಿಸಿದ್ದಾರೆ.

ವಿರಾಜಪೇಟೆ ತಾಲೂಕಿನ ಬೇತ್ರಿ ಗ್ರಾಮಸ್ಥರು ಮಳೆ ನೀರಿನ ಮಧ್ಯೆಯೇ ಧ್ವಜ ಹಾರಿಸಿ ದೇಶ ಪ್ರೇಮ ಮೆರೆದಿದ್ದಾರೆ. ಬೇತ್ರಿ ಮಸೀದಿಯಲ್ಲಿ ತೆಪ್ಪದ ಸಹಾಯದಿಂದ ಧ್ವಜ ಕಂಬದ ಹತ್ತಿರ ಹೋಗಿ ಸ್ಥಳೀಯರು ತಿರಂಗ ಧ್ವಜ ಹಾರಿಸಿದ್ದಾರೆ.

ಕೊಡಗು ಜಿಲ್ಲೆಯಾದ್ಯಂತ ಆಶ್ಲೇಷ ಮಳೆ ಅಬ್ಬರಿಸುತ್ತಿದ್ದು, ಹಲವೆಡೆ ಪ್ರವಾಹದ ಸ್ಥಿತಿ ಎದುರಾಗಿದೆ. ಕೊಡಗು ಜಿಲ್ಲೆಯ ವೀರಾಜಪೇಟೆ ತಾಲೂಕಿನ ಶ್ರೀಮಂಗಲ ಪಂಚಾಯತಿ ವ್ಯಾಪ್ತಿಯ ನಿವಾಸಿ ಚಂಗಪ್ಪನವರ ಶೆಡ್ ಕುಸಿದ ಪರಿಣಾಮ ನಿಲ್ಲಿಸಿದ್ದ ಕಾರು, ಜೀಪು, ಬೈಕ್, ಟಿಲ್ಲರ್ ಸಂಪೂರ್ಣ ಜಖಂಗೊಂಡಿದೆ. ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯ ಸಮೀಪದ ಗುಡ್ಡೆಯಲ್ಲಿ ನೀರು ಹರಿಯಲಾರಂಭಿಸಿದ ಪರಿಣಾಮ ಗುಡ್ಡೆ ಕುಸಿತಗೊಂಡಿದೆ.

ಗುಡ್ಡ ಕುಸಿದು ಕಾಂಪೌಂಡ್ ಮೇಲೆ ಬಿದ್ದ ಪರಿಣಾಮ ಶೆಡ್ ನಲ್ಲಿ ನಿಲ್ಲಿಸಿದ್ದ ವಾಹನಗಳು ಜಖಂಗೊಂಡಿದೆ. ಆದ್ರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ರೈತ ಸಂಘದ ಮುಖಂಡರಾದ ಅಜ್ಜಮಾಡ ಚಂಗಪ್ಪ ತೆರಳಿ ಕಂದಾಯ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ತೆರಳಿದ ಅಧಿಕಾರಿಗಳು ಮಹಜರು ನಡೆಸಿ ಮುಂದಿನ ಕ್ರಮ ಕೈಗೊಳ್ಳಲು ಭರವಸೆ ನೀಡಿದ್ದಾರೆ. ಅಂದಾಜು 7 ಲಕ್ಷ ರೂ. ಮೌಲ್ಯದ ವಸ್ತುಗಳು ಹಾನಿಯಾಗಿವೆ ಎಂದು ಅಂದಾಜಿಸಲಾಗಿದೆ.

ಹಾರಂಗಿ ಜಲಾಶಯದಿಂದ 20 ಸಾವಿರಕ್ಕೂ ಕ್ಯೂಸೆಕ್ ನೀರು ಬಿಟ್ಟ ಪರಿಣಾಮ ಕುಶಾಲನಗರ ಅನೇಕ ಬಡಾವಣೆ ನೀರಿನಲ್ಲಿ ಮುಳುಗಡೆಯಾಗಿದೆ. ಸುಮಾರು 60 ಮನೆಗಳಿಗೆ ಜಲಾವೃತವಾಗಿದ್ದು, ಗಂಜಿಕೇಂದ್ರ ಹಾಗೂ ಸಂಬಂಧಿಕರ ಮನೆಗಳಿಗೆ ತೆರಳುತ್ತಿದ್ದಾರೆ. ಅಲ್ಲದೇ ಬೆಂಗಳೂರಿನಿಂದ ಕೊಡಗಿಗೆ ರಕ್ಷಣಾ ತಂಡ ಬಂದಿದ್ದು, ಸುಮಾರು 30 ಜನರ ಎನ್ ಡಿ ಆರ್ ಎಫ್ ತಂಡ ಬೋಟ್ ಗಳ ಮೂಲಕ ರಕ್ಷಣಾ ಕಾರ್ಯಚರಣೆ ನಡೆಸುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *