ಶಾಸಕ ಶ್ರೀನಿವಾಸ್‌ಗೆ ಬೆವರಿಳಿಸಿದ ಗ್ರಾಮಸ್ಥರು

ತುಮಕೂರು: ಹಾಗಲವಾಡಿ ಕೆರೆಗೆ ನೀರು ಹರಿಸದ್ದಕ್ಕೆ ಸಾರ್ವಜನಿಕರು ಆಕ್ರೋಶಗೊಂಡಿದ್ದು, ಶಾಸಕ ಎಸ್.ಆರ್ ಶ್ರೀನಿವಾಸ್ ಅವರನ್ನು ತರಾಟೆಗೆ ತೆಗೆದುಕೊಂಡು ಆಕ್ರೋಶ ಹೊರಹಾಕಿದ್ದಾರೆ.

ಇಂದು ಹಾಗಲವಾಡಿ ಗ್ರಾಮದ ಕರಿಯಮ್ಮ ದೇವಿ ದೇವಸ್ಥಾನದ ಸಮುದಾಯ ಭವನ ಉದ್ಘಾಟನೆಗೆ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಆಗಮಿಸಿದ್ದರು. ಉದ್ಘಾಟನೆ ನೆರವೇರಿಸಿ ವೇದಿಕೆ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಾರ್ವಜನಿಕರು ಕ್ಲಾಸ್ ತೆಗೆದುಕೊಂಡಿದ್ದಾರೆ.

ವೇದಿಕೆ ಮೇಲೆ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಹೇಮಾವತಿ ನೀರು ಹರಿಸುವ ವಿಚಾರವಾಗಿ ಶ್ರೀನಿವಾಸ್ ಮಾತನಾಡಿದ್ದಾರೆ. ಆಗ ಸಿಟ್ಟಿಗೆದ್ದ ಗ್ರಾಮಸ್ಥರು ಹೇಮಾವತಿ ನೀರು ಹರಿಸುವ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದೀರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು. ನಂತರ ಶಾಸಕರ ಭಾಷಣಕ್ಕೆ ಗ್ರಾಮಸ್ಥರು ಅಡ್ಡಿ ಪಡಿಸಿದರು.

ವೇದಿಕೆಯಿಂದ ಕೆಳಗಿಳಿದರೂ ಸಹ ಗ್ರಾಮಸ್ಥರು ಶಾಸಕರನ್ನು ಬಿಡಲಿಲ್ಲ. ಕೆಳಗಿಳಿದು ಬರುತ್ತಿದ್ದಂತೆ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಸ್ಥಳದಲ್ಲಿ ತಳ್ಳಾಟ ನಡೆದಿದ್ದು, ಗಲಾಟೆಯಾಗುತ್ತಿದ್ದಂತೆ ಶಾಸಕ ಶ್ರೀನಿವಾಸ್ ಸ್ಥಳದಿಂದ ಕಾಲ್ಕಿತ್ತಿದ್ದಾರೆ.

Comments

Leave a Reply

Your email address will not be published. Required fields are marked *