ಪಾಕ್‍ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ- ಇಬ್ಬರು ಮಕ್ಕಳು ಬಲಿ

ಶ್ರೀನಗರ: ಸೋಮವಾರ ಪಾಕಿಸ್ತಾನ ಕದನ ವಿರಾಮವನ್ನು ಉಲ್ಲಂಘನೆ ಮಾಡಿದ್ದು, ಪೂಂಚ್ ಜಿಲ್ಲೆಯ ಕೆರ್ನಿ ಮತ್ತು ದಿಗ್ವಾರ್ ವಲಯದ ಗಡಿ (ಎಲ್‍ಒಸಿ) ಪ್ರದೇಶದಲ್ಲಿ ದಾಳಿ ನಡೆಸಿದೆ.

ಈ ದಾಳಿಯಲ್ಲಿ 10 ವರ್ಷದ ಬಾಲಕ ಮತ್ತು ಬಾಲಕಿ ಮೃತ ಪಟ್ಟಿದ್ದು, 9 ಜನ ತೀವ್ರವಾಗಿ ಗಾಯಗೊಂಡಿದ್ದಾರೆ. ಪಾಕ್ ಅಪ್ರಚೋದಿತ ದಾಳಿಗೆ ಭಾರತದ ಸೈನಿಕರು ಸೂಕ್ತ ಪ್ರತ್ಯುತ್ತರವನ್ನು ನೀಡಿದ್ದಾರೆ. ಎರಡೂ ಸೇನೆಯ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪಾಕ್ ಸೈನಿಕರು ಭಾರತೀಯ ಸೈನಿಕರನ್ನು ಗುರಿಯಾಗಿಸಿಕೊಂಡು ಶೆಲ್ ಹಾಗೂ ಗುಂಡಿನ ದಾಳಿಯನ್ನು ನಡೆಸಿದೆ. ಇದಕ್ಕೆ ಭಾರತೀಯ ಸೇನೆ ತಿರುಗೇಟು ನೀಡಿದೆ. ಪರಸ್ಪರ ಗುಂಡಿನ ದಾಳಿ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

 

Comments

Leave a Reply

Your email address will not be published. Required fields are marked *