ಪಟಿಯಾಲದ ಕಾಳಿ ದೇವಿ ಮುಂಭಾಗ ಹಿಂಸಾಚಾರ – 2 ಮಂದಿಗೆ ಗಾಯ

ಚಂಡೀಗಢ: ದೇಶಾದ್ಯಂತ ಧಾರ್ಮಿಕ ವಿಚಾರವಾಗಿ ಎಲ್ಲೆಡೆ ಹಿಂಸಾಚಾರ ವರದಿಗಳು ಆಗುತ್ತಲೇ ಇವೆ. ಇದೀಗ ಪಂಜಾಬ್‌ನ ಪಟಿಯಾಲದಲ್ಲೂ ಹಿಂಸಾಚಾರ ವರದಿಯಾಗಿದೆ.

ಶುಕ್ರವಾರ ಪಂಜಾಬ್‌ನ ಪಟಿಯಾಲದಲ್ಲಿ ಕಾಳೀ ದೇವಿ ದೇವಾಲಯದ ಮುಂಭಾಗದಲ್ಲಿ ಹಿಂಸಾಚಾರ ವರದಿಯಾಗಿದೆ. ಘಟನೆ ವೇಳೆ ಒಂದು ಗುಂಪು ಖಾಲಿಸ್ತಾನ್ ವಿರೋಧಿ ಪ್ರತಿಭಟನೆ ನಡೆಸಿದ್ದು, ಈ ವೇಳೆ ಸಂಘರ್ಷ ನಡೆದಿದೆ.

ಹಿಂಸಾಚಾರದ ವೇಳೆ ಇಬ್ಬರಿಗೆ ಗಾಯಗಳಾಗಿವೆ. ಈ ವೇಳೆ ಪಟಿಯಾಲದ ಕೆಲವು ಭಾಗಗಳಲ್ಲೂ ಉದ್ವಿಗ್ನತೆ ವರದಿಯಾಗಿದ್ದು, ಹಲವೆಡೆ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.

ಘರ್ಷಣೆಯ ಸಂದರ್ಭದಲ್ಲಿ ನೆರೆದಿದ್ದ ಒಂದು ಗುಂಪು ಮಹಾರಾಷ್ಟ್ರದ ಶಿವಸೇನೆಯದ್ದು ಎಂಬುದು ತಿಳಿದುಬಂದಿದೆ. ಇಲ್ಲಿ ಮೆರವಣಿಗೆಗೆ ಯಾವುದೇ ಅನುಮತಿ ಇಲ್ಲದ ಕಾರಣ ಶಿವಸೇನೆ ಮುಖ್ಯಸ್ಥ ಹರೀಶ್ ಸಿಂಗ್ಲಾ ಜೊತೆ ಮಾತುಕತೆ ನಡೆಸುತ್ತಿದ್ದೇವೆ ಎಂದು ಪಟಿಯಾಲ ಡಿಎಸ್‌ಪಿ ತಿಳಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್‌ ಸಮಸ್ಯೆ – ಕಲ್ಲಿದ್ದಲು ಸಾಗಾಟಕ್ಕೆ 650ಕ್ಕೂ ಹೆಚ್ಚು ಪ್ರಯಾಣಿಕ ರೈಲುಗಳ ಸಂಚಾರ ರದ್ದು

ಪಂಜಾಬ್ ಸಿಎಂ ಪ್ರತಿಕ್ರಿಯೆ:
ಪಟಿಯಾಲದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಪಂಜಾಬ್ ಸಿಎಂ ಭಗವಂತ್ ಮಾನ್, ಪಟಿಯಾಲದಲ್ಲಿ ನಡೆದ ಹಿಂಸಾಚಾರ ಅತ್ಯಂತ ದುರದೃಷ್ಟಕರ. ನಾನು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಹಾಗೂ ಆ ಪ್ರದೇಶದಲ್ಲಿ ಶಾಂತಿಯನ್ನು ಪುನಃ ಸ್ಥಾಪಿಸಲಾಗಿದೆ. ಘಟನೆ ಬಗ್ಗೆ ನಾವು ಗಂಭೀರವಾಗಿ ಗಮನಿಸುತ್ತಿದ್ದೇವೆ. ರಾಜ್ಯದಲ್ಲಿ ಇಂತಹ ಗೊಂದಲ ಸೃಷ್ಟಿಸಲು ಯಾರಿಗೂ ಅವಕಾಶ ನೀಡುವುದಿಲ್ಲ. ಪಂಜಾಬ್‌ನ ಶಾಂತಿ ಹಾಗೂ ಸೌಹಾರ್ದತೆ ಅತ್ಯಂತ ಮಹತ್ವದ್ದಾಗಿದೆ ಎಂದು ಟ್ವಿಟ್ಟರ್‌ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಮೀಸಲಾತಿ ಅಭ್ಯರ್ಥಿಗಳು ಅಧಿಕ ಅಂಕ ಗಳಿಸಿದ್ರೆ ಸಾಮಾನ್ಯ ವರ್ಗದಡಿ ಪರಿಗಣನೆ: ಸುಪ್ರೀಂ

 

Comments

Leave a Reply

Your email address will not be published. Required fields are marked *