ಅಶ್ವಿನ್ ಪಂಜಾಬ್ ತಂಡದ ಕ್ಯಾಪ್ಟನ್ ಆಯ್ಕೆ ಹಿಂದಿನ ಗುಟ್ಟು ಬಿಟ್ಟುಕೊಟ್ಟ ಸೆಹ್ವಾಗ್

ನವದೆಹಲಿ: ಮುಂಬರುವ 11ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕರಾಗಿ ಆರ್.ಅಶ್ವಿನ್ ರನ್ನು ಆಯ್ಕೆ ಮಾಡಲಾಗಿದೆ.

ಸಾಮಾಜಿಕ ಜಾಲತಾಣ ಫೇಸ್ ಬುಕ್ ಲೈವ್ ಮಾಡುವ ಮೂಲಕ ಸೋಮವಾರ ಅಶ್ವಿನ್ ತಂಡದ ನಾಯಕರಾಗಿ ಆಯ್ಕೆಯಾಗಿರುವುದನ್ನು ಪಂಜಾಬ್ ತಂಡದ ಸಲಹೆಗಾರ ಸೆಹ್ವಾಗ್ ತಿಳಿಸಿದ್ದರು. ಆದರೆ ಯುವರಾಜ್ ಸಿಂಗ್ ರನ್ನು ತಂಡದ ಕ್ಯಾಪ್ಟನ್ ಆಗಿ ಆಯ್ಕೆ ಮಾಡಬೇಕಿತ್ತು ಎಂದು ಅಭಿಮಾನಿಗಳು ಭಾರೀ ಚರ್ಚೆ ನಡೆಸಿದ್ದರು. ಇದರ ಬೆನ್ನಲ್ಲೇ ಅಭಿಮಾನಿಗಳ ಪ್ರತಿಕ್ರಿಯೆಗಳಿಗೆ ಸೆಹ್ವಾಗ್ ಉತ್ತರಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸೆಹ್ವಾಗ್ ತಂಡದ ಕ್ಯಾಪ್ಟನ್ ರೇಸ್ ನಲ್ಲಿ ಯುವರಾಜ್ ಸಿಂಗ್ ಇದ್ದರು. ಆದರೆ ಮ್ಯಾನೇಜ್ ಮೆಂಟ್ ಅಶ್ವಿನ್ ರನ್ನು ತಂಡದ ನಾಯಕರಾಗಿ ಆಯ್ಕೆ ಮಾಡಿದೆ ಎಂದರು.

ನಾನು ಸಹ ತಂಡಕ್ಕೆ ಬೌಲರ್ ಒಬ್ಬ ನಾಯಕರಾಗಿ ಆಯ್ಕೆ ಮಾಡುವ ಕುರಿತು ಚಿಂತನೆ ನಡೆಸಿದ್ದೆ. ಏಕೆಂದರೆ ಒಬ್ಬ ಬೌಲರ್ ತಂಡದ ನಾಯಕ ಆದರೆ ಪಂದ್ಯದ ಕುರಿತು ಬೇಗ ಅರಿತುಕೊಳ್ಳುತ್ತಾರೆ. ನಾನು ವಾಸಿಂ ಅಕ್ರಮ್, ಕಪಿಲ್ ದೇವ್ ಅವರ ಅಭಿಮಾನಿ ಇಬ್ಬರು ಬೌಲರ್ ಗಳು ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದರು. ಅಶ್ವಿನ್ ಸಹ ಉತ್ತಮವಾಗಿ ತಂಡವನ್ನು ಮುನ್ನಡೆಸುತ್ತಾರೆ ಎಂಬ ಭರವಸೆ ಇದೆ ಎಂದರು.

ತಂಡದ ನಾಯಕರಾಗಿ ಆಯ್ಕೆ ಆಗಿರುವ ಕುರಿತು ಪ್ರತಿಕ್ರಿಯೆ ನೀಡಿರುವ ಅಶ್ವಿನ್, ನನಗೆ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸಲು ಹೆಚ್ಚು ಉತ್ಸುಕನಾಗಿದ್ದೇನೆ. ತಂಡದ ಆಯ್ಕೆ ಸಮಿತಿ ಇಂತಹ ಅವಕಾಶ ನೀಡುತ್ತದೆ ಎಂದುಕೊಂಡಿರಲಿಲ್ಲ. ಮೊದಲ ಬಾರಿಗೆ ನಾಯಕನಾಗುವ ಅವಕಾಶ ಲಭಿಸಿದೆ ಎಂದರು.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಹರಜು ಪ್ರಕ್ರಿಯೆಯಲ್ಲಿ ಆರ್. ಅಶ್ವಿನ್ ರನ್ನು ಕಿಂಗ್ಸ್ ಇಲೆವೆನ್ ಪಂಜಾಬ್ 7.6 ಕೋಟಿ ನೀಡಿ ಖರೀದಿಸಿತ್ತು.

https://www.facebook.com/KingsXIPunjab/videos/1999757906705298/

Comments

Leave a Reply

Your email address will not be published. Required fields are marked *