ಸಿದ್ದರಾಮಯ್ಯಗೆ ಮಾತಿನ ಮೇಲೆ ಹಿಡಿತ ಇಲ್ಲ: ವಿಶ್ವನಾಥ್ ಕಿಡಿ

SR Vishwanath

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತಿನ ಮೇಲೆ ಹಿಡಿತ ಇಲ್ಲದಂತೆ ಮಾತನಾಡುತ್ತಾರೆ. ಹಿಂದುತ್ವ ಮತ್ತು ಆರ್‌ಎಸ್‌ಎಸ್ ವಿರೋಧ ಮಾಡಿದರೆ ಅಲ್ಪಸಂಖ್ಯಾತರು ಮತ ಹಾಕುತ್ತಾರೆ ಎಂಬ ಕೆಟ್ಟ ಅಭಿಪ್ರಾಯ ಹೊಂದಿದ್ದಾರೆ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಅವರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇವತ್ತು ಆರ್‌ಎಸ್‌ಎಸ್‌ ಇಲ್ಲದೇ ಹೋಗಿದ್ದರೆ ದೇಶದ ಪರಿಸ್ಥಿತಿ ಏನಾಗುತ್ತಿತ್ತು ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ನಾವೆಲ್ಲರೂ ಮೂಲ ಆರ್‌ಎಸ್‌ಎಸ್‍ನಿಂದ ಬಂದವರು. ನಮಗೆ ಯಾವುದೇ ರೀತಿಯಲ್ಲಿ ಬಹಿರಂಗವಾಗಿ ನೇಣಿಗೆ ಹಾಕಿ, ಕೈ ಕತ್ತರಿಸಿ, ಕಲ್ಲು ಹೊಡೆಯಿರಿ ಎಂದು ಆರ್‌ಎಸ್‌ಎಸ್‌ ಹೇಳಿಲ್ಲ. ಭಾರತ್ ಮಾತಾಕಿ ಜೈ ಎನ್ನಬೇಕು, ವಂದೇ ಮಾತರಂ ಹೇಳಬೇಕು, ನಮ್ಮ ದೇಶಕ್ಕೆ ಯಾವುದೇ ರೀತಿಯ ತೊಂದರೆ ಆದಾಗ ನಾವು ಧ್ವನಿ ಎತ್ತಬೇಕು. ಈ ದಿಸೆಯಲ್ಲಿ ಆರ್‌ಎಸ್‌ಎಸ್‌ ಕೆಲಸ ಮಾಡುತ್ತಿದೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: 18 ತಿಂಗಳ ಬಳಿಕ ಸವದತ್ತಿ ಎಲ್ಲಮ್ಮ ದರ್ಶನಕ್ಕೆ ಅವಕಾಶ- ಕಂಡಿಶನ್ಸ್ ಅಪ್ಲೈ

ಸಿದ್ದರಾಮಯ್ಯನವರು ಇನ್ನು ಮುಂದೆಯಾದರೂ ಇಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಚಡ್ಡಿಗಳು ಎಂದು ಹೇಳುವುದನ್ನು ನಿಲ್ಲಿಸಬೇಕು. ಬಹುಶಃ ಮೊನ್ನೆ ವಿಧಾನಸಭೆಯಲ್ಲಿ ಅವರ ಪಂಚೆ ಉದುರಿದಾಗ ಈ ಚಡ್ಡಿಯೇ ಅವರ ಮಾನ ಉಳಿಸಿದೆ. ದೇಶದ ಗೌರವ, ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಹೋರಾಟ ಮಾಡಿಕೊಂಡಿರುವ ಸಂಸ್ಥೆಯಿದು. ಒಮ್ಮೆ ಸಿದ್ದರಾಮಯ್ಯನವರು ನಮ್ಮ ಒಟಿಸಿ ಕ್ಯಾಂಪ್‍ಗೆ ಬಂದು ಅಲ್ಲಿನ ಶಿಸ್ತು ದೇಶಭಕ್ತಿಯನ್ನು ಕಲಿಯಲಿ. ಹೀಗೆ ಬಂದರೆ ಅವರ ಮನಃಸ್ಥಿತಿ ಬದಲಾಗುತ್ತದೆ. ದಯಮಾಡಿ ಸಿದ್ದರಾಮಯ್ಯನವರೇ ನೀವು ಒಂದು ತಿಂಗಳ ಮಟ್ಟಿಗೆ ನಮ್ಮ ಆರ್‌ಎಸ್‌ಎಸ್‍ನ ಒಟಿಸಿಗೆ ಬನ್ನಿ ಎಂದಿದ್ದಾರೆ. ಇದನ್ನೂ ಓದಿ: ತಾಲಿಬಾನ್‍ಗೂ, RSSಗೂ ವ್ಯತ್ಯಾಸ ಇದೆ: ಸಿದ್ದರಾಮಯ್ಯಗೆ ಆರಗ ಜ್ಞಾನೇಂದ್ರ ತಿರುಗೇಟು

ನೀವೆಲ್ಲಾ ತಾಲಿಬಾನ್ ಪರವಾಗಿರುವವರು, ಹಾಗಾಗಿ ಒಮ್ಮೆಯೂ ನೀವು ತಾಲಿಬಾನ್ ವಿರೋಧಿಸಿಲ್ಲ. ತಾಲಿಬಾನ್ ಮನಸ್ಥಿತಿ ಕಾಂಗ್ರೆಸ್‍ನವರಿಗೆ ಇದೆ. ನೀವು ಎಷ್ಟು ಆರ್‌ಎಸ್‌ಎಸ್‌ ಅನ್ನು ಟೀಕೆ ಮಾಡುತ್ತೀರಿ, ನರೇಂದ್ರ ಮೋದಿಯವರನ್ನು ಟೀಕೆ ಮಾಡುತ್ತೀರಿ, ಅಷ್ಟು ಕಪ್ಪು ಚುಕ್ಕೆ ನಿಮಗಾಗುತ್ತದೆ. ನಿಮಗೆ ತುಂಬಾ ಡ್ಯಾಮೇಜ್ ಆಗುತ್ತದೆ. ನೀವು ಹೀಗೆ ಮಾತನಾಡುತ್ತಾ ಹೋದರೆ, ಜನ ನಿಮ್ಮನ್ನು ಲೆಕ್ಕಕ್ಕೆ ಇಟ್ಟಿಕೊಳ್ಳುವುದಿಲ್ಲ. ನೀವು ಸೈಕಲ್, ಜಟಕಾ ಹತ್ತಿ ರಾಜ್ಯ ಸುತ್ತುವ ವೇಳೆಗೆ ನಾವು ಮತ್ತೊಮ್ಮೆ ಅಧಿಕಾರಕ್ಕೆ ಬರುತ್ತೇವೆ ಎಂದು ವ್ಯಂಗ್ಯವಾಡಿದ್ದಾರೆ.

Comments

Leave a Reply

Your email address will not be published. Required fields are marked *