ಕಬಿನಿಯಿಂದ ತಮಿಳುನಾಡಿಗೆ ರಾತ್ರೋರಾತ್ರಿ ನೀರು ಬಿಡುಗಡೆ

ಮೈಸೂರು: ಒಂದೆಡೆ ಪತನದಂಚಿನಲ್ಲಿ ದೋಸ್ತಿ ಸರ್ಕಾರವಿದೆ. ಇತ್ತ ಅಧಿಕಾರಿಗಳು ತಮಗೆ ಬೇಕಾದಂತೆ ದರ್ಬಾರ್ ಮಾಡುತ್ತಿದ್ದು, ರಾತ್ರೋರಾತ್ರಿ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ.

ಕಬಿನಿ ಜಲಾಶಯದಿಂದ ನಮ್ಮ ರೈತರಿಗೆ ನೀರು ಬಿಡದೆ ತಮಿಳುನಾಡಿಗೆ ಅಧಿಕಾರಿಗಳು ನೀರು ಬಿಡುಗಡೆ ಮಾಡಿದ್ದಾರೆ. ಖಾಸಗಿ ಕಂಪನಿಯ ಗೇಟ್ ಮೂಲಕ ತಮಿಳುನಾಡಿಗೆ ನೀರನ್ನು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಅಕ್ರಮವಾಗಿ ನೀರು ಬಿಟ್ಟಿದ್ದಾರೆಂದು ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಬಿನಿ ಜಲಾಶಯದಲ್ಲಿ ಗರಿಷ್ಠ ಮಟ್ಟ ತಲುಪುವ ಮುನ್ನ ತಮಿಳುನಾಡಿಗೆ ನೀರನ್ನು ಬಿಡಲಾಗಿದೆ. ರಾತ್ರಿಯಿಂದ ಸುಮಾರು 3 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಅಧಿಕಾರಿಗಳು ಬಿಟ್ಟಿದ್ದಾರೆ. ಕಬಿನಿ ಜಲಾಶಯದ ಗರಿಷ್ಠ ಮಟ್ಟ ತಲುಪಲು ಇನ್ನೂ 14 ಅಡಿ ಬಾಕಿ ಇದೆ. ಶುಕ್ರವಾರ 70 ಅಡಿ ಇದ್ದ ನೀರಿನ ಮಟ್ಟ ಈಗ 69 ಅಡಿಗೆ ಕುಸಿದಿದೆ. ಹೀಗಾಗಿ ಒಂದೇ ದಿನದಲ್ಲಿ ಕಬಿನಿ ಜಲಾಶಯದಲ್ಲಿ 1 ಅಡಿ ನೀರು ಕುಸಿದಿದೆ.

Comments

Leave a Reply

Your email address will not be published. Required fields are marked *