ದರ್ಶನ್ ರಾಜಕೀಯಕ್ಕೆ ಎಂಟ್ರಿ: ಮಾಜಿ ಪ್ರಧಾನಿ ಎಚ್‍ಡಿಡಿ ಹೇಳಿದ್ದು ಹೀಗೆ

ಬೆಂಗಳೂರು: ದರ್ಶನ್ ನಮ್ಮ ಪಕ್ಷಕ್ಕೆ ಬರುವುದಾದ್ದರೆ ಅವರಿಗೆ ಸ್ವಾಗತಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ.

ದರ್ಶನ್ ರಾಜಕೀಯ ಸೇರ್ಪಡೆ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಸಿನಿಮಾದವರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯದವರು ಸಿನಿಮಾರಂಗಕ್ಕೆ ಹೋಗುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ನಮ್ಮ ಪಕ್ಷಕ್ಕೆ ಅವರು ಸೇರ್ಪಡೆಯಾದರೆ ಸ್ವಾಗತ ಎಂದು ಹೇಳಿದರು.

ಮಾತನ್ನು ಮುಂದುವರಿಸಿ, ದರ್ಶನ್ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುವುದು ಎಲ್ಲ ಕುಮಾರಸ್ವಾಮಿ ಅವರಿಗೆ ಬಿಟ್ಟ ವಿಚಾರ ಎಂದು ಅವರು ಪ್ರತಿಕ್ರಿಯಿಸಿದರು.

ದರ್ಶನ್ ಕಾಂಗ್ರೆಸ್ ಸೇರ್ಪಡೆಯಾಗಿ 2019ರ ಲೋಕಸಭಾ ಚುನಾವಣೆಯಲ್ಲಿ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಪ್ರತಾಪ್ ಸಿಂಹ ವಿರುದ್ಧ ಕಣಕ್ಕೆ ಇಳಿಯುತ್ತಾರೆ ಎನ್ನುವ ಸುದ್ದಿ ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ. ಈ ವಿಚಾರದ ಬಗ್ಗೆ ಇದೂವರೆಗೂ ದರ್ಶನ್ ತಮ್ಮ ಸ್ಪಷ್ಟ ಅಭಿಪ್ರಾಯವನ್ನು ತಿಳಿಸಿಲ್ಲ.

 

Comments

Leave a Reply

Your email address will not be published. Required fields are marked *