ವ್ಹೀಲಿಂಗ್ ವಿಚಾರಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ

ಹಾಸನ: ವ್ಹೀಲಿಂಗ್ (Wheeling) ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ (Murder) ಅಂತ್ಯವಾದ ಘಟನೆ ಹಾಸನದ ಗವೇನಹಳ್ಳಿಯಲ್ಲಿ ನಡೆದಿದೆ. ಆಟೋ ಚಾಲಕ ಸುಮಂತ್ (20) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.

ಹಾಸನ (Hassan) ನಗರದ ನಿವಾಸಿ ಸುಮಂತ್ ಗವೇನಹಳ್ಳಿ (Gavenhalli) ಬಳಿ ತನ್ನ ಬೈಕ್‍ನಲ್ಲಿ (Bike) ವ್ಹೀಲಿಂಗ್ ಮಾಡುತ್ತಿದ್ದ. ವ್ಹೀಲಿಂಗ್ ಮಾಡದಂತೆ ಗವೇನಹಳ್ಳಿ ಗ್ರಾಮದ ಯುವಕರು ಹೇಳಿದ್ದಾರೆ. ಇದೇ ವಿಚಾರಕ್ಕೆ ಸುಮಂತ್ ಹಾಗೂ ಗವೇನಹಳ್ಳಿ ಗ್ರಾಮದ ಯುವಕರ ನಡುವೆ ಗಲಾಟೆ ಶುರುವಾಗಿದೆ. ಅಲ್ಲೇ ಇದ್ದ ಸ್ಥಳೀಯರು ಗಲಾಟೆ ಬಿಡಿಸಿ ಕಳುಹಿಸಿದ್ದರು. ಇದನ್ನೂ ಓದಿ: ಪತ್ರಕರ್ತ ಪ್ರಸಾದ್ ಹೆಗ್ಡೆ ನಿಧನ

CRIME 2

ಇಷ್ಟಕ್ಕೆ ಸುಮ್ಮನಾಗದ ಸುಮಂತ್ ಲಾಂಗ್ ಹಾಗೂ ಚಾಕುಗಳ ಜೊತೆ ತನ್ನ ಇಬ್ಬರು ಸ್ನೇಹಿತರನ್ನು ಕರೆದಕೊಂಡು ಗವೇನಹಳ್ಳಿಗೆ ಬಂದಿದ್ದಾನೆ. ವ್ಹೀಲಿಂಗ್ ಮಾಡುವುದನ್ನು ತಡೆದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಗ್ರಾಮದ ಪ್ರಜ್ವಲ್ ಮತ್ತು ಕೆಲವು ಯುವಕರು ಚಾಕು, ಲಾಂಗ್ ಕಿತ್ತುಕೊಂಡ ಸುಮಂತ್ ಎದೆ ಮತ್ತು ಹೊಟ್ಟೆಗೆ ಇರಿದಿದ್ದಾರೆ. ತಕ್ಷಣ ಗಾಯಾಳು ಸುಮಂತ್‍ನನ್ನು ಪೊಲೀಸರು ಆಸ್ಪತ್ರೆಗೆ ಸಾಗಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಬಡಾವಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಅಕಾಲಿಕ ಮಳೆಗೆ ಮಹಾರಾಷ್ಟ್ರದಲ್ಲಿ 5 ಸಾವು- ಹಿಮಾಚಲ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Comments

Leave a Reply

Your email address will not be published. Required fields are marked *