ಜ್ಯೋತಿಷ್ಯ ಹೇಳೋದು ಯಾವಾಗ ಕಲಿತಿದ್ದೀರಿ- ಬಿಎಸ್‍ವೈಗೆ ಮೊಯ್ಲಿ ಟಾಂಗ್

ಚಿಕ್ಕಬಳ್ಳಾಪುರ: ಭವಿಷ್ಯ ಹೇಳುವುದನ್ನು ಯಾವಾಗ ಕಲಿತಿದ್ದೀರಿ ಎಂದು ಸಂಸದ ವೀರಪ್ಪ ಮೊಯ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಪ್ರಶ್ನಿಸಿ ಟಾಂಗ್ ಕೊಟ್ಟಿದ್ದಾರೆ.

ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಗೆ ಚಿಕ್ಕಬಳ್ಳಾಪುರ ತಾಲೂಕು ಮಂಚನಬಲೆ ಗ್ರಾಮದ ಬೀರೇಶ್ವರ ಜಾತ್ರಾ ಮಹೋತ್ಸವದಲ್ಲಿ ತಿರುಗೇಟು ನೀಡಿದ ವೀರಪ್ಪ ಮೊಯ್ಲಿ ಅವರು, ಬಿಎಸ್‍ವೈ ಅವರದ್ದು ಹುಚ್ಚು ಮಾತುಗಳು. ಮೊದಲು ಯಡಿಯೂರಪ್ಪ ತಲೆಗೆ ಸ್ನಾನ ಮಾಡಿಕೊಂಡು ಸರಿ ಮಾಡಿಕೊಳ್ಳಲಿ ಎಂದರು.

ಮುಖ್ಯಮಂತ್ರಿಯಾಗಬೇಕು ಎಂಬುದು ಬಿ.ಎಸ್.ಯಡಿಯೂರಪ್ಪನವರ ಗುರಿ. ಆದರೆ ಅವರು ಈ ಜನ್ಮದಲ್ಲಿಯೇ ಸಿಎಂ ಆಗಲ್ಲ. ಯಡಿಯೂರಪ್ಪನವರ ಮಾತಿನಿಂದ ಯಾರೂ ಗಾಬರಿಯಾಗಬೇಕಿಲ್ಲ. ನೂರಕ್ಕೆ ನೂರರಷ್ಟು ನಾನು ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಎಸ್‍ವೈ ಹೇಳಿದ್ದೇನು?:
ಬಿಜೆಪಿ ನಾಯಕರ ಸಭೆಯಲ್ಲಿ ಮಾತನಾಡಿದ್ದ ಬಿ.ಎಸ್.ಯಡಿಯೂರಪ್ಪ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯ್ಲಿ ಅವರು ಸೋಲುವು ಖಚಿತ. ಅಷ್ಟೇ ಅಲ್ಲದೆ ಕೋಲಾರ ಕ್ಷೇತ್ರದಲ್ಲಿ ಕೆ.ಎಚ್.ಮುನಿಯಪ್ಪ, ಕಲಬುರಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಹಾಗೂ ತುಮಕೂರಿನಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸೋಲುತ್ತಾರೆ ಎಂದು ಹೇಳಿದ್ದರು.

Comments

Leave a Reply

Your email address will not be published. Required fields are marked *