ಮದ್ಯ ಸೇವಿಸಲು ಪತ್ನಿ ಹಣ ನೀಡಿಲ್ಲವೆಂದು ಪತಿ ಆತ್ಮಹತ್ಯೆಗೆ ಶರಣು

ಕಾರವಾರ: ಮದ್ಯ ಸೇವಿಸಲು ಪತ್ನಿ ಹಣ ನೀಡಲಿಲ್ಲ ಎಂದು ಕೋಪಗೊಂಡ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಚಲುವಾದಿಕೇರಿಯಲ್ಲಿ ನಡೆದಿದೆ.

ಬಷ್ಯ ಲಿಂಗ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಪ್ರತಿ ದಿನ ಮದ್ಯ ಸೇವಿಸುವ ಈತ, ಕೆಲಸ ಮಾಡದೆ ಮನೆಯಲ್ಲೇ ಇರುತಿದ್ದ. ಮದ್ಯ ಸೇವನೆಗಾಗಿ ಪತ್ನಿಯ ಬಳಿ ಹಣಕ್ಕಾಗಿ ಪೀಡಿಸುತಿದ್ದ. ಪ್ರತಿ ದಿನ ಪತ್ನಿ ಹಣ ನೀಡುತ್ತಿದ್ದಳು. ಆದರೆ ಇಂದು ನೀಡದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ನಾಯಿಯಿಂದ ನಾಯಿಗೆ ರಕ್ತದಾನ

ಪತ್ನಿ ಹಣ ನೀಡದಿದ್ದಕ್ಕೆ ಕೋಪ ಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *