ಅನೈತಿಕ ಸಂಬಂಧಕ್ಕೆ ಅಡ್ಡಿ- ಪ್ರಿಯಕರನ ಜೊತೆ ಸೇರಿ ಪತಿಯ ಹತ್ಯೆ!

ತುಮಕೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂದು ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಪತಿಯನ್ನು ಹತ್ಯೆ ಮಾಡಿದ್ದ ಹಂತಕಿ ಪತ್ನಿ ಹಾಗೂ ಪ್ರಿಯಕರನನ್ನು ತುಮಕೂರಿನ ಕೋರಾ ಪೊಲೀಸರು ಬಂಧಿಸಿದ್ದಾರೆ.

ಸಂಗೀತಾ ಹಾಗೂ ಆಕೆಯ ಪ್ರಿಯಕರ ತಿಪ್ಪೆಸ್ವಾಮಿ ಬಂಧಿತ ಆರೋಪಿಗಳು. ಜೂನ್ 16ರಂದು ಸೋಮಸಾಗರ ಗೇಟ್ ಬಳಿ ಹೊಗೆಯಾಡುತ್ತಿದ್ದ ಶವವೊಂದು ಪತ್ತೆಯಾಗಿತ್ತು. ಅದು ಆರೋಪಿ ಸಂಗೀತಾ ಪತಿ ನಾಗಾನಂದನ ಶವವಾಗಿತ್ತು.

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ಪತ್ನಿ ಸಂಗಿತಾ ಹಾಗೂ ಪ್ರಿಯಕರ ತಿಪ್ಪೆಸ್ವಾಮಿ ತಮ್ಮೂರು ಚಿತ್ರದುರ್ಗಕ್ಕೆ ಕರೆದುಕೊಂಡು ಹೋಗುವ ನೆಪದಲ್ಲಿ ದಾರಿ ಮಧ್ಯೆ ಹತ್ಯೆ ಮಾಡಿದ್ದಾರೆ. ಮದ್ಯ ಕುಡಿಸಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಸಾಯಿಸಿದ್ದಾರೆ. ಬಳಿಕ ಪೆಟ್ರೋಲ್ ಹಾಕಿ ಸುಟ್ಟಿದ್ದಾರೆ.

ಈ ಕೊಲೆಯ ಜಾಡು ಹಿಡಿದು ಹೊರಟ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಬ್ಬರು ಬೆಂಗಳೂರುನ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು.

Comments

Leave a Reply

Your email address will not be published. Required fields are marked *