ಪತಿ ಬೇಕೆಂದು ಮನೆಯ ಮುಂದೆ ಧರಣಿ ಕುಳಿತ ಪತ್ನಿ!

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹೊಸ ಬ್ರಹ್ಮಪುರದಲ್ಲಿ ಮಹಿಳೆಯೊಬ್ರು ಇಂದು ಬೆಳ್ಳಂಬೆಳಗ್ಗೆ ನ್ಯಾಯಕ್ಕಾಗಿ ಪತಿ ಮನೆ ಮುಂದೆ ಧರಣಿ ಕುಳಿತಿದ್ದಾರೆ.

ಧರಣಿ ಯಾಕೆ?: ಹುಬ್ಬಳ್ಳಿ ಮೂಲದ ಗೀತಾ, ಹರಿಹರದ ಗೋವಿಂದ ಎಂಬವರನ್ನ 8 ವರ್ಷದ ಹಿಂದೆ ವಿವಾಹ ಆಗಿದ್ದರು. ಬಳಿಕ ಮನೆಯವರ ಕಿರುಕುಳ ತಾಳಲಾರದೇ ತವರು ಮನೆಗೆ ಹೋಗಿದ್ರು. ಅಲ್ಲದೆ ಗಂಡನ ಮೇಲೆ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.

ಆದ್ರೆ ಇದೀಗ ತಮ್ಮ ಮಗುವಿನ ಭವಿಷ್ಯದ ದೃಷ್ಠಿಯಿಂದ ತನಗೆ ಪತಿ ಬೇಕು ಅಂತಾ ಪಟ್ಟುಹಿಡಿದಿದ್ದಾರೆ. ಹೀಗಾಗಿ ಇಂದು ಬೆಳಗ್ಗೆಯಿಂದ ಗಂಡನ ಮನೆಯ ಮುಂದೆ ಮಗಳ ಜೊತೆ ಧರಣಿ ಕುಳಿತುಕೊಂಡಿದ್ದಾರೆ. ಆದರೆ ಗಂಡನ ಮನೆಯವರು ಮಾತ್ರ ಯಾವುದಕ್ಕೂ ಲೆಕ್ಕ ಹಾಕುತ್ತಿಲ್ಲ. ಗೀತಾ ಪತಿ ಮಾತ್ರ ಬೆಳಗ್ಗೆಯಿಂದ ಪೊಲೀಸ್ ಠಾಣೆಯಲ್ಲಿ ಕುಳಿತಿದ್ದು, ಯಾವುದಕ್ಕೂ ಸ್ಪಷ್ಟನೆ ನೀಡುತ್ತಿಲ್ಲ.

ಗಂಡನ ಜೊತೆ ಜೀವನ ಮಾಡದೇ ಮನೆ ಬಿಟ್ಟು ಹೋಗುವುದಿಲ್ಲ ಎಂದು ಹಠ ಹಿಡಿದು ಮನೆ ಮುಂದೆಯೇ ಮಗುವಿನ ಜೊತೆ ಕುಳಿತು ಗೀತಾ ಅವರು ಏಕಾಂಗಿಯಾಗಿ ಪ್ರತಿಭಟನೆ ಮಾಡುತ್ತಿದ್ದಾರೆ.

 

Comments

Leave a Reply

Your email address will not be published. Required fields are marked *