ರಾಖಿ ಖರೀದಿಸಲು ಪತಿ ಹಣ ಕೊಡಲಿಲ್ಲವೆಂದು ಪತ್ನಿ ಆತ್ಮಹತ್ಯೆ

ಬೆಳಗಾವಿ: ಸಹೋದರನಿಗೆ ರಾಖಿ ಖರೀದಿಸಲು ಪತಿ ಹಣ ಕೊಡಲಿಲ್ಲ ಎಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಜಿಲ್ಲೆಯ ಮಲಪ್ರಭಾ ನಗರದಲ್ಲಿ ಈ ಘಟನೆ ಸಂಭವಿಸಿದ್ದು, ಮಹಾದೇವಿ ಗೊಲ್ಲರ(23) ನೇಣಿಗೆ ಶರಣಾದ ಮಹಿಳೆ. ಮಹಾದೇವಿ ತನ್ನ ಸಹೋದರನಿಗೆ ರಾಖಿ ಕಟ್ಟಲು ಪತಿಯ ಬಳಿ 10 ರೂ. ಕೇಳಿದ್ದಳು. ಆದರೆ ಪತಿ ಕೊಡಲಿಲ್ಲ ಎಂಬ ಕಾರಣಕ್ಕೆ ಪತ್ನಿ ನೇಣಿಗೆ ಶರಣಾಗಿದ್ದಾರೆ.

ಅಶೋಕ್ ಮತ್ತು ಮಹಾದೇವಿ ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆ ಆಗಿದ್ದರು. ಸದ್ಯ ಪತಿ ಅಶೋಕ್ ಗೊಲ್ಲರ ವಿರುದ್ಧ ಕೊಲೆ ಯತ್ನ ಎಂದು ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಅಶೋಕನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *