ಸಾಯಿ ಪಲ್ಲವಿ ಹೇಳಿಕೆ ‘ವಿರಾಟ ಪರ್ವಂ’ ಚಿತ್ರಕ್ಕೆ ಮುಳುವಾಯ್ತಾ?

ಸಾಯಿ ಪಲ್ಲವಿ ಮತ್ತು ರಾಣಾ ದಗ್ಗುಬಾಟಿ ಕಾಂಬಿನೇಷನ್ ನ ವಿರಾಟ ಪರ್ವಂ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇತ್ತು. ಇದೊಂದು ನಕ್ಸಲ್ ಹೋರಾಟದ ಹಿನ್ನೆಲೆಯಲ್ಲಿ ಮೂಡಿ ಬಂದ ಸಿನಿಮಾವಾಗಿದ್ದರಿಂದ ಮತ್ತು ಈವರೆಗೂ ಸಾಯಿ ಪಲ್ಲವಿಯ ಬಹುತೇಕ ಚಿತ್ರಗಳು ಹಿಟ್ ಆಗಿರುವುದರಿಂದ, ವಿರಾಟ ಪರ್ವಂ ಚಿತ್ರಕ್ಕೆ ಭರ್ಜರಿ ಓಪನಿಂಗ್ ಸಿಗಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ, ಲೆಕ್ಕಾಚಾರ ತಲೆಕೆಳಗಾಗಿದೆ. ಸಾಯಿ ಪಲ್ಲವಿ ಹೇಳಿಕೆಯಿಂದಾಗಿ ಸಿನಿಮಾಗೆ ಎಫೆಕ್ಟ್ ಆಗಿದೆ ಎನ್ನಲಾಗುತ್ತಿದೆ.

ವಿರಾಟ ಪರ್ವಂ ಸಿನಿಮಾದ ಟ್ರೈಲರ್, ಫಸ್ಟ್ ಲುಕ್ ಮತ್ತು ಪೋಸ್ಟರ್ ಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು. ಅಲ್ಲದೇ, ಇದೇ ಮೊದಲ ಬಾರಿಗೆ ಸಾಯಿ ಪಲ್ಲವಿ ಈ ರೀತಿಯ ಪಾತ್ರ ಮಾಡಿದ್ದರಿಂದ, ಅಭಿಮಾನಿಗಳು ಚಿತ್ರವನ್ನು ಅಪ್ಪಿಕೊಳ್ಳುತ್ತಾರೆ ಎನ್ನುವ ಸುದ್ದಿಯಿತ್ತು. ಅದು ನಿಜವಾಗಿಲ್ಲ ಎನ್ನುವುದು ಎರಡು ದಿನದ ಬಾಕ್ಸ್ ಆಫೀಸ್ ರಿಪೋರ್ಟ್ ಹೇಳುತ್ತಿದೆ. ಇದನ್ನೂ ಓದಿ:ಚಾರ್ಲಿ 777 ತೆರಿಗೆ ವಿನಾಯತಿ: ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಅಸಮಾಧಾನ ಏಕೆ?

ಸಿನಿಮಾ ಪ್ರಚಾರದ ಭಾಗವಾಗಿ ಸಾಯಿ ಪಲ್ಲವಿ ಸಂದರ್ಶನವೊಂದರಲ್ಲಿ ಕಾಶ್ಮೀರಿ ಪಂಡಿತರ ಹತ್ಯ ಮತ್ತು ಗೋವು ಸಾಗಿಸುತ್ತಿದ್ದಾಗ ಅನ್ಯ ಕೋಮಿನ ವ್ಯಕ್ತಿಯೊಬ್ಬರ ಹತ್ಯೆಯನ್ನು ಹೋಲಿಕೆ ಮಾಡಿ ಮಾತನಾಡಿದ್ದರು. ಹಿಂದೂಗಳನ್ನೇ ಟಾರ್ಗೆಟ್ ಮಾಡಿಕೊಂಡು ಈ ಮಾತುಗಳನ್ನು ಸಾಯಿ ಪಲ್ಲವಿ ಆಡಿದ್ದಾರೆ ಎನ್ನುವಂತೆ ಸುದ್ದಿ ಆಯಿತು. ಈ  ಹೇಳಿಕೆಯೇ ಸಿನಿಮಾ ಓಟಕ್ಕೆ ಬ್ರೇಕ್ ಹಾಕಿದೆ ಎಂದು ಹೇಳಲಾಗುತ್ತಿದೆ. ಸಿನಿಮಾ ರಿಲೀಸ್ ಆಗಿ ಇಂದಿಗೆ ಮೂರು ದಿನಗಳಾಗಿವೆ. ಎರಡು ದಿನದ ಬಾಕ್ಸ್ ಆಫೀಸ್ ಕಲೆಕ್ಷನ್ ನಿರೀಕ್ಷಿತ ಮಟ್ಟದಲ್ಲಿ ಇಲ್ಲ ಎಂದು ಹೇಳಲಾಗುತ್ತಿದೆ.

Live Tv

Comments

Leave a Reply

Your email address will not be published. Required fields are marked *