ವರದಕ್ಷಿಣೆ ನೀಡದ್ದಕ್ಕೆ ಮಹಿಳೆಗೆ ಆ್ಯಸಿಡ್ ಕುಡಿಸಿದ ಅತ್ತೆ

ಲಕ್ನೋ: ವರದಕ್ಷಿಣೆ (Dowry) ನೀಡದ್ದಕ್ಕೆ ಅತ್ತೆಯೊಬ್ಬಳು ಮಹಿಳೆಗೆ (Woman) ಆ್ಯಸಿಡ್ (Acid) ಕುಡಿಸಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ (Uttar Pradesh) ಬರೇಲಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಉತ್ತರ ಪ್ರದೇಶದ ಉಡಾಲ ಜಾಗೀರ್ ಗ್ರಾಮದ ನಿವಾಸಿ ಅಂಜುಮ್ (25) ಎಂದು ಗುರುತಿಸಲಾಗಿದೆ. ಆಕೆಯ ಪೋಷಕರು ಮದುವೆ ಸಮಯದಲ್ಲಿ 2.50 ಲಕ್ಷ ರೂ. ನಗದು ಹಾಗೂ ವರದಕ್ಷಿಣೆಗಾಯಿ ಕಾರನ್ನು ನೀಡಬೇಕೆಂದು ಬೇಡಿಕೆ ಇಟ್ಟಿದ್ದರು. ಆದರೆ ಅಂಜುಮ್ ಪೋಷಕರು ಅದನ್ನು ನೀಡುವಲ್ಲಿ ವಿಫಲವಾದ್ದರಿಂದ ಆಕೆಯ ಅತ್ತೆ ಕೋಪದಲ್ಲಿ ಆ್ಯಸಿಡ್ ಕುಡಿಸಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ.

ಘಟನೆಗೆ ಸಂಬಂಧಿಸಿ ಅಂಜುಮ್ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆಕೆಯ ಪತಿ ಹಾಗೂ ಅತ್ತೆ ವಿರುದ್ಧ ದೂರು ದಾಖಲಿಸಿದ್ದಾರೆ.

ಬರೇಲಿ ಗ್ರಾಮೀಣ ಪೊಲೀಸ್ ಮಾತನಾಡಿ, ಇದು ಅತ್ಯಂತ ಗಂಭೀರ ವಿಷಯವಾಗಿದೆ. ನವಾಬ್‍ಗಂಜ್ ಮತ್ತು ಬಿತ್ರಿ ಚೈನ್‍ಪುರ್ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಸೋಮವಾರ ನನ್ನ ಜೀವನದಲ್ಲಿ ಮರೆಯಲಾಗದ ಕ್ಷಣ: ಬಿಎಸ್‍ವೈ

6 ವರ್ಷಗಳ ಹಿಂದೆ ಉಡಾಲ ಜಾಗೀರ್ ಗ್ರಾಮದ ಇಲಿಯಾಸ್ ಎಂಬಾತನನ್ನು ಅಂಜುಮ್ ಮದುವೆಯಾಗಿದ್ದಳು. 15 ದಿನಗಳ ಹಿಂದೆ ಅಂಜುಮ್ ತನ್ನ ಪೋಷಕರ ಮನೆಗೆ ಭೇಟಿ ನೀಡಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ. 2.50 ಲಕ್ಷ ನಗದು ಮತ್ತು ಕಾರು ನೀಡುವಂತೆ ಒತ್ತಾಯಿಸುತ್ತಿದ್ದಾರೆ ಎಂದು ತಿಳಿಸಿದ್ದಳು ಎಂದು ಆಕೆಯ ಸಹೋದರಿ ಹೇಳಿದ್ದಾಳೆ. ಇದನ್ನೂ ಓದಿ: ಪತ್ನಿಯನ್ನು ಕೊಂದು ಬ್ಯಾರಲ್‍ಗೆ ತುಂಬಿದ್ದವ ಅರೆಸ್ಟ್

Comments

Leave a Reply

Your email address will not be published. Required fields are marked *