ಸಮಯಕ್ಕೆ ಬಾರದ ಅಂಬುಲೆನ್ಸ್- ಗರ್ಭಿಣಿಯನ್ನ ಬೈಕಿನಲ್ಲಿ ಕರೆ ತರುವಾಗ ಹೆದ್ದಾರಿಯಲ್ಲಿಯೇ ಹೆರಿಗೆ

ಬಾಗಲಕೋಟೆ: ಆಸ್ಪತ್ರೆಗೆ ತೆರೆಳಲು ಅಂಬುಲೆನ್ಸ್ ಲಭ್ಯವಾಗಿಲ್ಲ. ಅಲ್ಲದೆ ಯಾವುದೇ ಖಾಸಗಿ ವಾಹನ ಸಹ ಸಿಕ್ಕಿಲ್ಲ. ಹೀಗಾಗಿ ಪತಿ ಬೈಕ್ ಮೇಲೆ ಗರ್ಭಿಣಿ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಹೆದ್ದಾರಿಯಲ್ಲೇ ಗರ್ಭಿಣಿಗೆ ಹೆರಿಗೆಯಾಗಿದೆ.

ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿಯಲ್ಲಿ ಸೈದಾಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಮಂಜುಳಾ ಪಿಡಾಯಿ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹೆರಿಗೆ ಬಳಿಕ ಸ್ಥಳೀಯರು ಅಂಬುಲೆನ್ಸ್ ಗೆ ಕರೆ ಮಾಡಿದ್ದು, ನಂತರ ಅಂಬುಲೆನ್ಸ್ ಮೂಲಕ ಬಾಣಂತಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಮಹಲಿಂಗಪುರ ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ತಾಯಿ, ಮಗು ಆರೋಗ್ಯವಾಗಿದ್ದಾರೆ. ಬಾಣಂತಿ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಸೈದಾಪುರ ಗ್ರಾಮದ ನಿವಾಸಿಯಾಗಿದ್ದು, ಹೆರಿಗೆ ಬಳಿಕ ಸ್ಥಳೀಯ ಖಾಸಗಿ ವೈದ್ಯರಿಂದ ತಪಾಸಣೆ ನಡೆಸಲಾಗಿದೆ. ನಂತರ ಅಂಬುಲೆನ್ಸ್ ಮೂಲಕ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Comments

Leave a Reply

Your email address will not be published. Required fields are marked *