ಮಹಿಳೆಯ ಚಿನ್ನದ ಸರ ಕದ್ದು ಖದೀಮರು ಎಸ್ಕೇಪ್ – ವೀಡಿಯೋ ವೈರಲ್

ಬೀದರ್: ಅಂಗಡಿಯಿಂದ ಹಾಲು ತೆಗೆದುಕೊಂಡು ಬರುವಾಗ ಸರಗಳ್ಳರು ಮಹಿಳೆಯೊಬ್ಬರ ಸರ ಕದ್ದು ಕ್ಷಣಾರ್ಧದಲ್ಲಿ ಪರಾರಿಯಾದ ಘಟನೆ ಜಿಲ್ಲೆಯ ಪ್ರತಾಪ್ ನಗರದಲ್ಲಿ ನಡೆದಿದೆ.

ನಗರದಲ್ಲಿ ಸರಗಳ್ಳರ ಹಾವಳಿಗೆ ಮಹಿಳೆಯರು ಬೆಚ್ಚಿ ಬಿದ್ದಿದ್ದು, ಬೈಕ್‍ನಲ್ಲಿ ಬಂದ ಖದೀಮರು ಮಹಿಳೆಯ ಕತ್ತಿನಲ್ಲಿದ್ದ ಸರ ಎಗರಿಸಿ ಪರಾರಿಯಾಗಿದ್ದಾರೆ. ಪ್ರತಾಪ ನಗರದ ನಿವಾಸಿ ಶ್ರೀದೇವಿ ಅವರ ಚಿನ್ನದ ಸರ ಕದ್ದು ಖದೀಮರು ಎಸ್ಕೇಪ್ ಆಗುವ ವೀಡಿಯೋ ಭಯಾನಕವಾಗಿದೆ. ಚಿನ್ನದ ಸರ ಎಗರಿಸಿದ ರಭಸಕ್ಕೆ ಮಹಿಳೆ ರಸ್ತೆ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಮೋದಿ, ಅಮಿತ್ ಶಾರನ್ನು ನಿಂದಿಸಿದ್ದ ವ್ಯಕ್ತಿ ಬಂಧನ

ಖದೀಮರು ಮಹಿಳೆಯ ಕತ್ತಿನಿಂದ ಚಿನ್ನದ ಸರ ಎಗರಿಸುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ವೀಡಿಯೋವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಂಭೀರವಾಗಿ ಗಾಯಗೊಂಡ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ನ್ಯೂ ಟೌನ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಮ್ಮಿಂದ ತಪ್ಪಾಗಿದೆ: ಕ್ಷಮೆ ಕೇಳಿದ ಶ್ರೀಲಂಕಾ ಅಧ್ಯಕ್ಷ

Comments

Leave a Reply

Your email address will not be published. Required fields are marked *