ವಿದೇಶದಲ್ಲಿ ಕೆಲಸದ ಆಮಿಷವೊಡ್ಡಿ ವಂಚನೆ- ಮನನೊಂದು ಮಹಿಳೆಯಿಂದ ಆತ್ಮಹತ್ಯೆಗೆ ಯತ್ನ!

ಬೆಂಗಳೂರು: ಕೆನಡಾದಲ್ಲಿ ಕೆಲಸ ಕೊಡಿಸುವ ಆಸೆ ತೋರಿಸಿ ಪರಿಚಿತರೆ ವಂಚನೆ ಮಾಡಿದ್ದರಿಂದ ಮನನೊಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಬಾಣಸವಾಡಿಯಲ್ಲಿ ನಡೆದಿದೆ.

ಜಯಕುಮಾರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಇವರು ಬಾಣಸವಾಡಿಯ ಜೈ ಭಾರತ್ ನಗರ ನಿವಾಸಿಯಾಗಿದ್ದ ಇವರಿಗೆ ಇಂದ್ರ, ಶೆರ್ಲಿನ್, ಹಾಗೂ ಸಂತೋಷ್ ಎಂಬ ಪರಿಚಯಸ್ಥರು ಕೆನಡಾದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ್ದಾರೆ. ಇದನ್ನು ನಂಬಿದ ಅವರು ಸುಮಾರು 8 ಲಕ್ಷ ರೂ. ಹಣವನ್ನು ನೀಡಿದ್ದಾರೆ. ಹಣ ಪಡೆದ ಮೂವರು ಕೆಲಸ ಕೊಡಿಸದೇ ಮಹಿಳೆಗೆ ವಂಚಿಸಿದ್ದಾರೆ. ಇದರಿಂದ ಮನನೊಂದು ಜಯಕುಮಾರಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಕೂಡಲೇ ಜಯಕುಮಾರಿಯವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸುತ್ತಿದ್ದು, ಘಟನೆ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *