2 ಆಟೋ, ಕಾರ್ ಡಿಕ್ಕಿ – ಮಹಿಳೆ ದುರ್ಮರಣ, ಐವರು ಗಂಭೀರ

ಕಾರವಾರ: ಎರಡು ಆಟೋ ಹಾಗೂ ಕಾರಿನ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿದ್ದು, ಐವರಿಗೆ ಗಂಭೀರವಾಗಿ ಗಾಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ರಂಗಿನಕಟ್ಟೆ ಬಳಿ ನಡೆದಿದೆ.

ಶಿರಾಲಿ ಗ್ರಾಮದ ಮಾದೇವಿ ಸುರೇಶ್ ನಾಯ್ಕ್ (42) ಮೃತ ದುರ್ದೈವಿ. ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ರಂಗಿನಕಟ್ಟೆ ಬಳಿ ಎರಡು ಆಟೋ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಿಂದ ಆಟೋ ಚಾಲಕರಾದ ನಾಗೇಶ್ ನಾಯ್ಕ್, ಚಂದ್ರ ನಾಯ್ಕ್ ಹಾಗೂ ಪ್ರಯಾಣಿಕ ಭಾಸ್ಕರ್ ನಾಯ್ಕ್ ಗಾಯಗೊಂಡವರಾಗಿದ್ದಾರೆ.

ಕಾರಿನಲ್ಲಿದ್ದ ಬೆಂಗಳೂರಿನ ರತ್ನಮ್ಮ ಮುನೇಟಪ್ಪ(22) ಮತ್ತು ಕಾವ್ಯಾ ವೆಂಕಟೇಶ್(20)ಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಘಟನೆ ಸಂಬಂಧ ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *