ಮಾಜಿ ಪತಿ, ಆತನ ಗೆಳೆಯರಿಂದ ಅತ್ಯಾಚಾರಕ್ಕೊಳಗಾಗಿ ಮಹಿಳೆ ಸಾವು

-ಮಹಿಳೆಯ ಖಾಸಗಿ ಭಾಗಕ್ಕೆ ಕಟ್ಟಿಗೆ ತುರುಕಿದ ಕಿರಾತಕರು

ರಾಂಚಿ: ಮಾಜಿ ಪತಿ ಮತ್ತು ಆತನ ಗೆಳೆಯರಿಂದ ಅತ್ಯಾಚಾರಕ್ಕೆ ಒಳಗಾಗಿ ಮಹಿಳೆ ಸಾವನ್ನಪ್ಪಿದ ಅಮಾನವೀಯ ಘಟನೆ ಜಾರ್ಖಂಡ್ ರಾಜ್ಯದ ಜಮ್ತಾರಾ ಜಿಲ್ಲೆಯಲ್ಲಿ ನಡೆದಿದೆ. ಗುರುವಾರ ಈ ಘಟನೆ ನಡೆದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.

ಬುಧವಾರ ರಾತ್ರಿ ಮಹಿಳೆ ‘ಕಾಳಿ ಪೂಜೆ’ ಸಿನಿಮಾ ನೋಡಲು ತೆರಳಿದ್ದರು. ರಾತ್ರಿ ಸಿನಿಮಾದಿಂದ ಮನೆಗೆ ಹಿಂದಿರುಗುವ ವೇಳೆ ಎದುರಾದ ಮಾಜಿ ಪತಿ ಮತ್ತು ಆತನ ಸ್ನೇಹಿತರು ಮಹಿಳೆಯನ್ನು ಅಪಹರಿಸಿದ್ದಾರೆ. ಮಹಿಳೆಯನ್ನು ನಾರಾಯಣಪುರ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಗ್ರಾಮದ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾರೆ. ಮೂವರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಸಂತ್ರಸ್ತೆಯ ಗುಪ್ತಾಂಗಕ್ಕೆ ಕಟ್ಟಿಗೆಯನ್ನು ತುರುಕಿಸಿ ಕ್ರೌರ್ಯ ಮರೆದಿದ್ದಾರೆ. ನಂತರ ಮಹಿಳೆಯನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ.

ಗುರುವಾರ ಬೆಳಗ್ಗೆ ಮಹಿಳೆಯ ಕಿರುಚಾಟ ಕೇಳಿದ ಗ್ರಾಮಸ್ಥರು ಕೂಡಲೇ ಸಂತ್ರಸ್ತೆಯನ್ನು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೂಡಲೇ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಗ್ರಾಮಸ್ಥರು ತಡಮಾಡದೇ ಜಿಲ್ಲಾಸ್ಪತ್ರೆ ಕರೆದುಕೊಂಡು ಹೋದಾಗ ಸಂತ್ರಸ್ತೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು ಈ ಬಗ್ಗೆ ಖಚಿತಪಡಿಸಿದ್ದಾರೆ.

ಈ ಸಂಬಂಧ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಮಹಿಳೆಯ ಮಾಜಿ ಪತಿಯನ್ನು ಬಂಧಿಸಲಾಗಿದೆ. ಇನ್ನಿಬ್ಬರು ನಾಪತ್ತೆಯಾಗಿದ್ದು, ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿ ಬಿ.ಎನ್. ಸಿಂಗ್ ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *