ಅನೈತಿಕ ಸಂಬಂಧಕ್ಕೆ ಒಪ್ಪದ ಪತಿಗೆ ಬೆಂಕಿ ಹಚ್ಚಿದ್ಳು!

ಗಾಂಧಿನಗರ: ಅನೈತಿಕ ಸಂಬಂಧವನ್ನು ಒಪ್ಪದಿದ್ದಕ್ಕೆ ಪತ್ನಿಯೇ ತನ್ನ ಪತಿಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿರುವ ಘಟನೆ ಗುಜರಾತ್‍ನ ಪಂಚಮಹಲ್ ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆ ಬುಧವಾರ ರಾತ್ರಿ ಗೋವಿಂದ ಗ್ರಾಮದಲ್ಲಿ ನಡೆದಿದ್ದು, ಗುರೂಜಿ ಮಾನೋರ್ಭಾಯಿ ತದ್ವಿ ಮೃತ ಪತಿ ಎಂದು ಗುರುತಿಸಲಾಗಿದೆ. ಗುರುವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆರೋಪಿ ಪತ್ನಿ ಬುಧಿಬೆನ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ತದ್ವಿ ಬುಧವಾರ ರಾತ್ರಿ ಮನೆಯಲ್ಲಿ ಊಟ ಮಾಡುತ್ತಿದ್ದರು. ಈ ವೇಳೆ ಪತ್ನಿ ಬುಧಿಬೆನ್ ನ ಅನೈತಿಕ ಸಂಬಂಧ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿ ಅನೈತಿಕ ಸಂಬಂಧವನ್ನು ವಿರೋಧಿಸಿದ್ದಕ್ಕೆ ಕೋಪಗೊಂಡ ಆರೋಪಿ ಪತ್ನಿ ಅಲ್ಲೆ ಇದ್ದ ಸೀಮೆಎಣ್ಣೆ ಸುರಿದು ಪತಿಗೆ ಬೆಂಕಿ ಹಚ್ಚಿದ್ದಾಳೆ ಎಂದು ಇನ್ಸ್ ಪೆಕ್ಟರ್ ಆರ್.ಆರ್. ದೇಸಾಯಿ ಹೇಳಿದ್ದಾರೆ.

ದೇಹದ ಶೇ.80 ರಷ್ಟು ಭಾಗ ಸುಟ್ಟು ಹೋಗಿದ್ದು, ಕೂಡಲೇ ಅವರನ್ನು ಗೋಧ್ರಾ ಪಟ್ಟಣದಲ್ಲಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮುಂಜಾನೆ ಮೃತಪಟ್ಟಿದ್ದಾರೆ. ಆರೋಪಿ ಪತ್ನಿ ಎರಡು ವರ್ಷಗಳ ಹಿಂದೆಯೇ ಪತಿಯನ್ನು ಬಿಟ್ಟು ಅನೈತಿಕ ಸಂಬಂಧ ಹೊಂದಿದ್ದ ಲವ್ವರ್ ಜೊತೆ ವಾಸಿಸುತ್ತಿದ್ದಳು. ಆದರೆ ಮೂರು ತಿಂಗಳ ಹಿಂದೆ ಮತ್ತೆ ವಾಪಸ್ ಬಂದು ಪತಿಯೊಂದಿಗೆ ವಾಸಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯಕ್ಕೆ ಆರೋಪಿ ಪತ್ನಿಯ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದು, ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *