ಮದುವೆಗೆ ಒಲ್ಲೆ ಎಂದಿದ್ದಕ್ಕೆ ಯುವತಿಗೆ ಬೆಂಕಿ ಹಚ್ಚಿದ್ರು!

ಜೈಪುರ: ಮದುವೆಯಯಾಗಲು ನಿರಾಕರಿಸಿದ್ದಾಳೆ ಎನ್ನುವ ಕ್ಷುಲಕ್ಕ ಕಾರಣಕ್ಕೆ ಯುವತಿಗೆ ಯುವಕ ಮತ್ತು ಆತನ ತಂದೆ ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ರಾಜಸ್ಥಾನದ ಬಾಣಸ್ವಾರ ಜಿಲ್ಲೆಯ ಐಸಲ್ರ್ವಾದಲ್ಲಿ ಘಟನೆ ನಡೆದಿದ್ದು, 18 ವರ್ಷದ ಯುವತಿಯನ್ನು ಸೀಮಾ ಎಂದು ಗುರುತಿಸಲಾಗಿದೆ.

ತನ್ನನ್ನು ಮದುವೆಯಾಗುವಂತೆ ಆರೋಪಿ ರವಿ ಸೀಮಾ ಬಳಿ ಬೇಡಿಕೆ ಇಟ್ಟಿದ್ದ. ಆದರೆ ತನ್ನ ಆಸೆಯನ್ನು ನಿರಾಕರಿಸಿದಕ್ಕೆ ಸೀಮಾ ಮನೆಗೆ ತೆರಳಿ ರವಿ ಬೆಂಕಿಯನ್ನು ಹಚ್ಚಿದ್ದಾನೆ. ತಕ್ಷಣ ಸೀಮಾಳನ್ನು ಸಮೀಪದ ಎಂಜಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಆದರೆ ಶೇ.75 ರಷ್ಟು ಸುಟ್ಟ ಗಾಯಗಳಾಗಿರುವುದರಿಂದ ಸೀಮಾ ಸ್ಥಿತಿ ಗಂಭೀರವಾಗಿದ್ದು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.

ಘಟನೆಯ ಬಗ್ಗೆ ಸೀಮಾಳ ತಂದೆ ಪ್ರತಿಕ್ರಿಯಿಸಿದ್ದು, ರವಿ ಎಂಬಾತ ತನ್ನನ್ನು ಮದುವೆಯಾಗುವಂತೆ ಮಗಳ ಬಲಿ ಬೇಡಿಕೆ ಇಟ್ಟಿದ್ದ. ಆದರೆ ಆಕೆ ನಿರಾಕರಿಸಿದ್ದಕ್ಕೆ ಆತ ತನ್ನ ತಂದೆ ಜೊತೆ ಸೇರಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಿದ್ದಾರೆ.

ಈ ಮೊದಲೇ ಯುವತಿ ಹಾಗೂ ಆಕೆಯ ಕುಟುಂಬಕ್ಕೆ ಮದುವೆ ಕುರಿತು ಕಿರುಕುಳವನ್ನು ಆರೋಪಿಗಳು ನೀಡಿದ್ದರು. ಈ ಕುರಿತು ಸೀಮಾಳ ತಂದೆ ಪೊಲೀಸರಿಗೆ ದೂರನ್ನು ಸಹ ನೀಡಿದ್ದರು. ಆದರೆ ಅಧಿಕಾರಿಗಳು ಇವರ ವಿರುದ್ಧ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ತಿಳಿಸಿದ್ದಾರೆ.

ಈ ಘಟನೆಯ ಕುರಿತು ಆಸ್ಪತ್ರೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Comments

Leave a Reply

Your email address will not be published. Required fields are marked *