ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಯುವತಿ ದುರ್ಮರಣ!

ಹಾಸನ: ಚಲಿಸುತ್ತಿದ್ದ ರೈಲಿನಿಂದ ಆಯತಪ್ಪಿ ಬಿದ್ದು ಯುವತಿ ಮೃತಪಟ್ಟ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರೀಸಾವೆ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ದಿವ್ಯಶ್ರೀ (21) ಮೃತ ಯುವತಿಯಾಗಿದ್ದು, ಇವರು ಮೂಲತಃ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಮೇಟಿಮೆಳ್ಳಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದು ಬಂದಿದೆ.

ಬುಧವಾರ ಸಂಜೆ ಶ್ರವಣಬೆಳಗೊಳದಿಂದ ಬೆಂಗಳೂರಿಗೆ ರೈಲಿನಲ್ಲಿ ತೆರುಳುತ್ತಿದ್ದ ದಿವ್ಯಶ್ರೀ ಹಿರೇಸಾವೆ ರೈಲ್ವೇ ನಿಲ್ದಾಣದ ಹತ್ತಿರ ಬರುತ್ತಿದ್ದಂತೆಯೇ ರೈಲಿನ ಬಾಗಿಲ ಬಳಿ ನಿಂತಿದ್ದಾರೆ. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದು ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದೆ.

ಕೂಡಲೇ ದಿವ್ಯಶ್ರೀ ಅವರನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಇಂದು ಬೆಳಗ್ಗೆ ಮೃತ ಪಟ್ಟಿದ್ದಾರೆ.

Comments

Leave a Reply

Your email address will not be published. Required fields are marked *