ಪತಿಯೊಂದಿಗೆ ಜಗಳವಾಡಿದ ಕೋಪದಲ್ಲಿ ಮಗುವಿನ ಕತ್ತು ಹಿಸುಕಿ ಕೊಂದ್ಲು

ನವದೆಹಲಿ: ಪತಿಯೊಂದಿಗೆ ಜಗಳವಾಡಿದ ಕೋಪದಲ್ಲಿ ಮಹಿಳೆಯೊಬ್ಬಳು ತನ್ನ ಮೂರು ತಿಂಗಳ ಮಗುವನ್ನೆ ಕತ್ತು ಹಿಸುಕಿ ಕೊಂದ ಘಟನೆ ನವದೆಹಲಿಯಲ್ಲಿ ನಡೆದಿದೆ.

ವಾಯುವ್ಯ ದೆಹಲಿಯ ಶಾಲಿಮಾರ್ ಬಾಗ್ ನಿವಾಸಿ ಅಂಜಲಿ ದೇವಿ(26) ಬಂಧಿತ ಆರೋಪಿ. ತನ್ನ ಪತಿಯೊಂದಿಗೆ ಕ್ಷುಲ್ಲಕ ವಿಚಾರಕ್ಕಾಗಿ ಅಂಜಲಿ ದೇವಿ ಜಗಳವಾಡಿದ್ದಳು. ಇದಾದ ಬಳಿಕ ಪತಿ ಕೆಲಸಕ್ಕೆ ತೆರಳಿದ್ದರು. ಕೋಪದ ಭರದಲ್ಲಿದ್ದ ಅಂಜಲಿ ತನ್ನ ಮೂರು ತಿಂಗಳ ಮಗುವನ್ನು ಕತ್ತು ಹಿಸುಕಿ ಕೊಂದಿದ್ದಾಳೆ.

ಈ ಬಗ್ಗೆ ಉಪ ಪೊಲೀಸ್ ಆಯುಕ್ತರಾದ ಉಷಾ ರಂಗಾನಿ ಮಾತನಾಡಿ, ತಾಯಿ ಶಿಶುವನ್ನು ಕೊಂದಿರುವ ಬಗ್ಗೆ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದಾಗ ಅಂಜಲಿದೇವಿಯು ಮಗುವಿನ ಕುತ್ತಿಗೆಗೆ ದಾರದಿಂದ ಬಿಗಿದು ಕೊಂದಿದ್ದಾರೆ ಎಂದು ತಿಳಿದು ಬಂದಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಧರ್ಮ ದಂಗಲ್‌ಗೆ ನಾವು ಕಾರಣರಲ್ಲ: ಹಿಜಬ್ ಪರ ವಿದ್ಯಾರ್ಥಿನಿಯರು

ಮಗುವಿನ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದಾದ ನಂತರ ಅದನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು. ಈ ಕುರಿತು ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಂಜಲಿ ದೇವಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಬೈಕ್‍ಗೆ ಲಾರಿ ಡಿಕ್ಕಿ – ಫಾರ್ಮಾ ಕಂಪನಿ ನೌಕರ ಸಾವು

Comments

Leave a Reply

Your email address will not be published. Required fields are marked *