ಅಕ್ರಮ ಬಡ್ಡಿ ವ್ಯವಹಾರ ಶಂಕೆ – ಮಹಿಳೆಯ ಮೇಲೆ ಶೂಟೌಟ್

ಚಿಕ್ಕೋಡಿ: ಅಕ್ರಮವಾಗಿ ಬಡ್ಡಿ ವ್ಯವಹಾರದ ಕೋಪಕ್ಕೆ ಮಹಿಳೆಯ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ನಿವಾಸಿ ಶೈಲಾ ನಿರಂಜನ ಸುಭೇದಾರ್ (56) ಎಂಬುವವರ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲಾಗಿದೆ. ಆರೋಪಿಗಳು ನಿರಂಜನ ಸುಭೇದಾರ್ ತಲೆಗೆ ಪಿಸ್ತೂಲಿನಿಂದ ಶೂಟ್ ಮಾಡಿ ಪರಾರಿ ಆಗಿದ್ದಾರೆ. ಇತ್ತ ಕೊಲೆಯಾದ ಮಹಿಳೆ ಅಕ್ರಮವಾಗಿ ಬಡ್ಡಿ ವ್ಯವಹಾರ ನಡೆಸುತ್ತಿದ್ದರೆಂಬ ಮಾತು ಕೇಳಿ ಬರುತ್ತಿದ್ದು, ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಸಾಲ ವಸೂಲಿಗಾಗಿ ವೃದ್ಧೆಗೆ ಬಂದೂಕು ತೋರಿಸಿ ಹೆದರಿಸಿದ ಆಸಾಮಿ

ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಕೊಲೆಗೆ ಬಡ್ಡಿ ವ್ಯವಹಾರ ಕಾರಣ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಮಿಸೆಸ್ ವರ್ಲ್ಡ್ 2022 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ಹಳ್ಳಿ ಸುಂದರಿ ನವ್ದೀಪ್ ಕೌರ್

Comments

Leave a Reply

Your email address will not be published. Required fields are marked *