ಆಸ್ತಿ ವಿವಾದ – ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ಪುತ್ರನ ಬರ್ಬರ ಹತ್ಯೆ

ಯಾದಗಿರಿ: ಆಸ್ತಿ ವಿಚಾರವಾಗಿ ಸಂಬಂಧಿಗಳ ನಡುವೆ ಆರಂಭವಾದ ಕಲಹ ತಂದೆ, ಮಗನ ಜೋಡಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಯಾದಗಿರಿ ಸಮೀಪದ ಹತ್ತಿಕುಣಿ ಗ್ರಾಮದ ಬಳಿ ನಡೆದಿದೆ.

ಗ್ರಾಮದ ಶರಣಪ್ಪ ಗಡ್ಡೀಮನಿ ಪೂಜಾರಿ (55), ಪುತ್ರ ಸಣ್ಣ ಸಾಬಣ್ಣ (29) ಕೊಲೆಯಾದರಾಗಿದ್ದು, ಗ್ರಾಮದ ಸಮೀಪದ ಹತ್ತಿಕುಣಿ ಭಾಗದ ತೋಟಗಾರಿಕೆ ಪ್ರದೇಶ ಬಳಿ ಘಟನೆ ನಡೆದಿದೆ. ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷರಾಗಿದ್ದ ಗಡ್ಡೀಮನಿ ಪೂಜಾರಿ ಹಾಗೂ ಅವರ ಸಂಬಂಧಿಕರ ನಡುವೆ ಆಸ್ತಿ ವಿಚಾರದಲ್ಲಿ ಕಲಹ ಇತ್ತ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿಯೇ ಗಡ್ಡೀಮನಿ ಹಾಗೂ ಅವರ ಪುತ್ರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕೊಲೆಯಾದ ಶರಣಪ್ಪಗೆ ನಾಲ್ವರು ಪುತ್ರರು ಹಾಗೂ ಮೂವರು ಪುತ್ರಿಯರು ಇದ್ದು, ಆಸ್ತಿ ವಿಚಾರಕ್ಕೆ ಸಂಬಂಧಿಗಳಿಂದಲೇ ಕೊಲೆ ಮಾಡಿದರೆಂದು ಶಂಕಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಯಾದಗಿರಿ ಗ್ರಾಮೀಣ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *