ಪತ್ನಿ, ಪುತ್ರ ಜೊತೆ ದೇವಿ ಚಾಮುಂಡೇಶ್ವರಿಗೆ ಯದುವೀರ್ ಪೂಜೆ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಯದುವೀರ್ ದಂಪತಿ ಕುಟುಂಬ ಸಮೇತವಾಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಪತ್ನಿ ತ್ರಿಷಿಕಾ ಹಾಗೂ ಪುತ್ರ ಆದ್ಯವೀರ್ ಜೊತೆಗೂಡಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದೇವಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ. ಸಂಪ್ರದಾಯದಂತೆ ವಾಲಗ ಸಮೇತವಾಗಿ ದೇಗುಲದ ಅರ್ಚಕರು ಯದುವೀರ್ ಹಾಗೂ ಅವರ ಕುಟುಂಬದವರನ್ನು ಬರಮಾಡಿಕೊಂಡಿದ್ದಾರೆ.

ಇನ್ನೂ ದೇವಸ್ಥಾನಕ್ಕೆ ಪೂಜೆಗೆ ಬಂದಿದ್ದ ಯದುವೀರ್ ಜೊತೆ ಸೆಲ್ಫಿಗೆ ಜನರು ಮುಗಿಬಿದ್ದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಕಾರಿನಲ್ಲಿ ಕೂತಿದ್ದ ವೇಳೆ ಜನರು ಸೆಲ್ಫಿಗೆ ಯದುವೀರ್ ಪೋಸ್ ನೀಡಿದರು. ಇದನ್ನೂ ಓದಿ: ದಕ್ಷಿಣ ಕನ್ನಡದ ಈ ಹನುಮನ ಕೃಪೆಯಿಂದ ಯದುವೀರ್ -ತ್ರಿಷಿಕಾಗೆ ಪುತ್ರ ಸಂತಾನ!

Comments

Leave a Reply

Your email address will not be published. Required fields are marked *