ದಾವಣಗೆರೆ: ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಒಡೆಯರ್ ಅವರು ಗುರುವಾರ ದಾವಣಗೆರೆ ಬೆಣ್ಣೆ ರುಚಿ ಸವಿದಿದ್ದಾರೆ.
ದಾವಣಗೆರೆ ಎಂದಾಕ್ಷಣ ಮೊದಲು ನೆನಪಿಗೆ ಬರೋದು ಬೆಣ್ಣೆದೋಸೆ. ಹೀಗಾಗಿ ನಗರಕ್ಕೆ ಭೇಟಿ ನೀಡಿದ ಮಹಾರಾಜರು ವಿದ್ಯಾನಗರ ರಸ್ತೆಯ ಡೆಂಟಲ್ ಕಾಲೇಜ್ ಮುಂಭಾಗದ ಗುರುಕೊಟ್ಟುರೇಶ್ವರ ಹೋಟೆಲ್ನಲ್ಲಿ ಆಪ್ತರೊಂದಿಗೆ ಬೆಣ್ಣೆ ದೋಸೆ ಸೇವಿಸಿದರು. ಬಳಿಕ ಮಹಾರಾಜರ ಜೊತೆ ಸಾರ್ವಜನಿಕರು, ಪೊಲೀಸರು ಫೋಟೋ ಕ್ಲಿಕ್ಕಿಸಿಕೊಂಡರು.
ಯದುವೀರ್ ಅವರು ಭಾನುವಾರ ಐತಿಹಾಸಿಕ ಹಂಪಿಗೆ ಭೇಟಿ ನೀಡಿ ಪ್ರಸಿದ್ಧ ಸ್ಮಾರಕಗಳನ್ನು ವೀಕ್ಷಣೆ ಮಾಡಿದ್ದರು. ಕಮಲಾಪುರ ಹಾಗೂ ತಳವಾರಘಟ್ಟ ರಸ್ತೆ ಮೂಲಕ ಆಗಮಿಸಿದ ಯದುವೀರ್ ಗೆಜ್ಜಲ ಮಂಟಪ, ಕುದುರೆ ಗೊಂಬೆ ಮಂಟಪ, ವಿಠಲ ಬಜಾರ್, ಪುಷ್ಕರಣಿ, ಪ್ರಸಿದ್ಧ ವಿಜಯವಿಠಲ ದೇವಸ್ಥಾನದಲ್ಲಿ ಕಲ್ಲಿನ ರಥ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಒಡೆಯರ್ ಅವರನ್ನು ನೋಡಿ ಪ್ರವಾಸಿಗರು ಅವರ ಜೊತೆ ಫೋಟೋ, ಸೆಲ್ಫಿ ತಗೆದುಕೊಂಡಿದ್ದರು.

ಹಂಪಿ ಪ್ರವಾಸದ ಬಳಿಕ ಯದುವೀರ್ ಒಡೆಯರ್ ಅವರು ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪೌರಾಣಿಕ ಹಾಗೂ ಐತಿಹಾಸಿಕ ಅಂಜನಾದ್ರಿಯ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ಆಂಜನೇಯ ಸ್ವಾಮಿ ದರ್ಶನ ಪಡೆದು, ಪೂಜೆ ಸಲ್ಲಿಸಿದ್ದರು. ಕೊಪ್ಪಳದಿಂದ ಮೈಸೂರಿಗೆ ಹಿಂತಿರುಗುವ ಮಾರ್ಗಮಧ್ಯೆ ದಾವಣಗೆರೆಗೆ ಆಗಮಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply