ಬೆಳಗಾವಿ ಪಾಲಿಟಿಕ್ಸ್‌ಗೆ ಇಂದು ಮೆಗಾ ಟ್ವಿಸ್ಟ್

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರ ಬಿಜೆಪಿ ಪಾಲಿಗೆ ಬಂಡಾಯದ ಉಂಡೆಯಂತಾಗಿದೆ. ಚಿಕ್ಕೋಡಿ ಕ್ಷೇತ್ರದ ಟಿಕೆಟ್ ಅಣ್ಣಾ ಸಾಹೇಬ್ ಜೊಲ್ಲೆ ಪಾಲಾಗಿರುವ ಹಿನ್ನೆಲೆಯಲ್ಲಿ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ರಮೇಶ್ ಕತ್ತಿ ಸಿಡಿದೆದ್ದಿದ್ದಾರೆ.

ಅಂದಹಾಗೆ ರಾಜ್ಯದ ಮಟ್ಟಿಗೆ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಸದಾ ಬೆಂಬಲವಾಗಿ ನಿಲ್ಲುತ್ತಿದ್ದ ಶಾಸಕ ಉಮೇಶ್ ಕತ್ತಿ ತಮ್ಮ ಸಹೋದರ ರಮೇಶ್ ಕತ್ತಿಗೆ ಟಿಕೆಟ್ ಸಿಗದೇ ಇರೋದಕ್ಕೆ ಗರಂ ಆಗಿದ್ದಾರೆ. ಅಷ್ಟೇ ಅಲ್ಲದೆ ಯುಗಾದಿ ಮುನ್ನ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದ್ದು, ಬೆಳಗಾವಿಯಿಂದಲೇ ಹೊಸ ಯುಗ ಆರಂಭವಾಗಲಿದೆ ಎಂದು ಎಚ್ಚರಿಸಿದ್ದರು.

ಹೀಗಾಗಿ ಬಿಎಸ್‍ವೈ ಕತ್ತಿ ಮನವೊಲಿಕೆಗಾಗಿ ಇಂದು ಬೆಳಗಾವಿಗೆ ದೌಡಾಯಿಸುತ್ತಿದ್ದಾರೆ. ಕಳೆದರೆಡು ದಿನಗಳಿಂದ ಈ ಬೆಳವಣಿಗೆಳನ್ನ ಗಮನಿಸಿರುವ ಯಡಿಯೂರಪ್ಪ ಉಮೇಶ್ ಕತ್ತಿ ಮನವೊಲಿಕೆಗೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಂಧಾನ ಸಭೆ ನಡೆಯಲಿದ್ದು, ಬೆಳಗಾವಿಯ ಕೆಎಲ್‍ಇ ಗೆಸ್ಟ್ ಹೌಸ್‍ನಲ್ಲಿ ಮೀಟಿಂಗ್ ನಡೆಯಲಿದೆ.

Comments

Leave a Reply

Your email address will not be published. Required fields are marked *