ಕಾಲೇಜಿಗೆ ಹೋಗುವಾಗ ಜಡೆ ಎಳೆದು, ಅಶ್ಲೀಲ ಮಾತುಗಳನ್ನಾಡಿ ಕಿರುಕುಳ- ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ: ಪುಂಡರ ಕಿರುಕುಳದಿಂದ ನೊಂದ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಆಘಾತಕಾರಿ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ರಾಧಿಕಾ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಶೀರನಕಟ್ಟೆ ಗ್ರಾಮದ ಮನೆಯಲ್ಲಿ ರಾಧಿಕಾ ನೇಣಿಗೆ ಕೊರಳೊಡಿದ್ದಾಳೆ.

ಮುದ್ದಪ್ಪ, ಸುದೀಪ್, ಕೋಟಿ, ಅಭಿ ಎಂಬವರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಕಾಲೇಜಿಗೆ ಹೋಗುವಾಗ ಬರುವಾಗ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದಾರೆ. ಜಡೆ ಹಿಡಿದು ಎಳೆಯುವುದು, ಅಶ್ಲೀಲವಾಗಿ ಮಾತಾಡಿ ಕಿರುಕುಳ ಕೊಡುತ್ತಿರುವುದಾಗಿ ಆರೋಪಿಸಲಾಗಿದೆ.

ಈ ಬಗ್ಗೆ ಪೋಷಕರ ಬಳಿ ರಾಧಿಕಾ ಹೇಳಿಕೊಂಡಿದ್ದಳು. ಮೃತ ಬಾಲಕಿಯ ಪೋಷಕರು ಹೊಸದುರ್ಗ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೆ ಶೀಘ್ರ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಧರಣಿ ನಡೆಸಿದ್ದಾರೆ. ಇದನ್ನೂ ಓದಿ: ಮನೆಗೆ ತಡವಾಗಿ ಬಂದ ತಮ್ಮನನ್ನು ಅಣ್ಣ ಪ್ರಶ್ನಿಸಿದ್ದೇ ತಪ್ಪಾಯ್ತು!

Comments

Leave a Reply

Your email address will not be published. Required fields are marked *