ಡಾಬಾದಲ್ಲಿ ಊಟ ಮಾಡುತ್ತಿದ್ದ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ

ಮಂಡ್ಯ: ಡಾಬಾದಲ್ಲಿ ಊಟ ಮಾಡುತ್ತಿದ್ದ ಯುವಕನನ್ನು ಇರಿದು ಬರ್ಬರವಾಗಿ ಕೊಲೆಗೈದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೊಪ್ಪ ಗ್ರಾಮ ಸಿಂಚನ ಡಾಬಾದಲ್ಲಿ ನಡೆದಿದೆ.

ಕೊಪ್ಪ ಗ್ರಾಮದ ಸಾಗರ್ (25) ಹತ್ಯೆಯಾದ ಯುವಕ. ಘಟನೆ ಸಂಬಂಧಿಸಿದಂತೆ ಓರ್ವ ಆರೋಪಿ ರಾಕೇಶ್‍ನನ್ನು ಪೊಲೀಸರು ಬಂಧಿಸಿದ್ದು, ಮತ್ತಿಬ್ಬರಾದ ಗಿರೀಶ್ ಹಾಗೂ ಪ್ರತಾಪ್ ಗಾಗಿ ಶೋಧ ನಡೆಸುತ್ತಿದ್ದಾರೆ. ಇದನ್ನೂ ಓದಿ: PSI ನೇಮಕಾತಿಯಲ್ಲಿ ಅಕ್ರಮ ಪ್ರಕರಣ- ಆರೋಪಿ ಪತಿಯನ್ನೇ ಜೈಲಿಗಟ್ಟಿದ ಜೈಲರ್ ಪತ್ನಿ!

ಡಾಬಾದಲ್ಲಿ ಊಟ ಮಾಡುತ್ತಿದ್ದಾಗ ಪಕ್ಕದ ಟೇಬಲಿನಲ್ಲಿ ಗಲಾಟೆ ನಡೆಯಿತು. ಈ ವೇಳೆ ಗಲಾಟೆ ಬಿಡಿಸಲು ಸಾಗರ್ ಮಧ್ಯಪ್ರವೇಶ ಮಾಡಿದ್ದ. ಆಗ ಸಾಗರ್ ಎದೆಗೆ ಗಿರೀಶ್ ಚಾಕುವಿನಿಂದ ಚುಚ್ಚಿದ್ದಾನೆ. ತಕ್ಷಣ ಸಾಗರ್‍ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಗೆ ರವಾನೆ ಮಾಡಲಾಯಿತು.

ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Comments

Leave a Reply

Your email address will not be published. Required fields are marked *