ಪ್ರೀತಿಸಿ ಮದುವೆಯಾದ ಮೂರೇ ದಿನಕ್ಕೆ ಯುವತಿಯ ಹತ್ಯೆ – ದಲಿತಳು ಎಂದು ಕೊಲೆ ಆರೋಪ

ಮಡಿಕೇರಿ: ಪ್ರೀತಿಸಿ ಮದುವೆಯಾದ (Wedding) ಮೂರೇ ದಿನಕ್ಕೆ ನವವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಕೊಲೆಯಾಗಿರುವ ಘಟನೆ ಕೊಡಗಿನ (Kodagu) 6ನೇ ಹೊಸಕೋಟೆಯಲ್ಲಿ ನಡೆದಿದೆ.

ಅಕ್ಷತಾ (18) ಕೊಲೆಯಾದ ಯುವತಿ. ಹೇಮಂತ್ ಎಂಬಾತ ಅಕ್ಷತಾಳನ್ನು ಪ್ರೀತಿಸಿ ಮದುವೆಯಾಗಿದ್ದ. 3 ದಿನಗಳ ಹಿಂದೆ ಇಬ್ಬರು ದೇವಾಲಯದಲ್ಲಿ ಮದುವೆಯಾಗಿ ಬಂದಿದ್ದರು. ಈ ಇಬ್ಬರು ಒಂದೇ ಗ್ರಾಮದವರಾಗಿದ್ದು, ಬೇರೆ ಬೇರೆ ಸಮುದಾಯದವರಾಗಿದ್ದರು. ಇದನ್ನೂ ಓದಿ: ಮುಷ್ಕರಕ್ಕೂ ಮೊದಲೇ ಜಯ – KPTCL, ESCOM ನೌಕರರ ವೇತನ ಹೆಚ್ಚಳ

ಹೇಮಂತ್‍ನ ಪೋಷಕರಾದ ದಶರಥ ಮತ್ತು ಗಿರಿಜಾ ಇಬ್ಬರಿಗೂ ಈ ಮದುವೆ ಇಷ್ಟವಿರಲಿಲ್ಲ. ಇದರಿಂದಾಗಿ ಹೇಮಂತ್ ಪೋಷಕರು ಅಕ್ಷತಾ ದಲಿತ ಯುವತಿ ಎನ್ನುವ ಕಾರಣಕ್ಕೆ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದೆ. ಘಟನೆಗೆ ಸಂಬಂಧಿಸಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೃತದೇಹ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಶಾಸಕ ಅಭಯ್ ಪಾಟೀಲ್‍ರಿಂದ ಶಾಲಾ ಮಕ್ಕಳಿಗೆ ಐಸ್‍ಕ್ರೀಂ ವಿತರಣೆ

Comments

Leave a Reply

Your email address will not be published. Required fields are marked *