ಪ್ರಿಯಕರನ ಪತ್ನಿಯ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಯುವತಿ ಜೈಲುಪಾಲು!

ಚಿಕ್ಕಬಳ್ಳಾಪುರ: ಪ್ರಿಯಕರನ ಪತ್ನಿಯ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ ಯುವತಿ ಜೈಲುಪಾಲಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಆನೆಮಡುಗು ಗ್ರಾಮದಲ್ಲಿ ನಡೆದಿದೆ.

ಗ್ರಾಮದ 19 ವರ್ಷದ ಯುವತಿ ಗಂಗೋತ್ರಿ ಕೊಲೆ ಮಾಡಲು ಯತ್ನಿಸಿದ ಯುವತಿ‌. ಇದನ್ನೂ ಓದಿ: ಕಲಬುರಗಿ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಡೇಟ್‌ ಫಿಕ್ಸ್‌- ಯಾವ ವರ್ಗಕ್ಕೆ ಸ್ಥಾನ ಮೀಸಲು?

ಯುವತಿ ಗಂಗೋತ್ರಿ ಹಾಗೂ ಇದೇ ಗ್ರಾಮದ ಗಂಗರಾಜು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಗಂಗರಾಜು ಕಳೆದ 10 ತಿಂಗಳ ಹಿಂದೆ ಅಕ್ಕನ ಮಗಳಾದ ಮೋನಿಕಾಳನ್ನು ಮದುವೆಯಾಗಿದ್ದ. ಇದನ್ನು ಸಹಿಸದ ಗಂಗೋತ್ರಿ ಬಹಿರ್ದೆಸೆಗೆ ತೆರಳಿದ್ದ ಮೋನಿಕಾಳ ಕತ್ತು ಕೊಯ್ದು ಕೊಲೆ ಮಾಡಲು ಯತ್ನಿಸಿದ್ದಾಳೆ‌‌‌. ಗಾಯಾಳು ಮೋನಿಕಾರನ್ನು ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕತ್ತಿಗೆ 8 ಹೊಲಿಗೆ ಬಿದ್ದಿದೆ. ಕೈಗೆ ಚಾಕುವಿನಿಂದ ಇರಿದ ಗಾಯಗಳಾಗಿದ್ದು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ

ಆರೋಪಿ ಗಂಗೋತ್ರಿಯನ್ನು ಪೊಲೀಸರು ಬಂಧಿಸಿದ್ದು, ಘಟನೆಯಲ್ಲಿ ಸಂತ್ರಸ್ತೆ ಗಂಡ ಗಂಗರಾಜು ಪಾತ್ರದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಗಂಗರಾಜನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Comments

Leave a Reply

Your email address will not be published. Required fields are marked *