ಮದುವೆಯಾಗುತ್ತೇನೆಂದು ನಂಬಿಸಿ ಕೈಕೊಟ್ಟ ಪ್ರಿಯಕರ – ಮನನೊಂದು ಯುವತಿ ಆತ್ಮಹತ್ಯೆ

ಚಿಕ್ಕೋಡಿ: ಮದುವೆಯಾಗುತ್ತೇನೆಂದು ನಂಬಿಸಿ ಪ್ರಿಯಕರ ಕೈಕೊಟ್ಟ ಹಿನ್ನೆಲೆಯಲ್ಲಿ ಅಥಣಿ ಪೊಲೀಸ್‌ ಠಾಣೆ ವ್ಯಾಪ್ತಿಯ ತಾಂವಶಿ ಗ್ರಾಮದ ಯುವತಿಯೊಬ್ಬಳು ಮನನೊಂದು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ತೇಜಸ್ವಿನಿ ಗಂಗಪ್ಪ ಗುಜ್ಜರ (21) ಆತ್ಮಹತ್ಯೆ ಮಾಡಿಕೊಂಡ ಯುವತಿ. ಅಥಣಿ ಪಟ್ಟಣದ ಆಸೀಫ್ ದೇಸಾಯಿ ಪ್ರೀತಿಸಿ ಕೈಕೊಟ್ಟಿದ್ದಾನೆ ಎಂದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೂರು ಮಕ್ಕಳನ್ನು ನೀರಿನ ಸಂಪ್‌ಗೆ ಎಸೆದು, ಮಹಿಳೆ ಆತ್ಮಹತ್ಯೆ

ಆರೋಪಿ ಆಸೀಫ್‌, ತೇಜಸ್ವಿನಿಯನ್ನು ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ. ಜ.26ರಂದು ಮದುವೆ ಆಗುವುದಿಲ್ಲ ಎಂದು ಆಶೀಫ್ ನಿರಾಕರಿಸಿದಾಗ ಮನನೊಂದ ತೇಜಸ್ವಿನಿ ಕೀಟನಾಶಕ ಸೇವಿಸಿದ್ದಳು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

ಮೃತಳ ತಾಯಿ ಶೋಭಾ ಗುಜ್ಜರ ಅವರು ಅಥಣಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ಬೆಳ್ಳಿ, ಬಂಗಾರ ಪದಕ ಗೆದ್ದುಕೊಟ್ಟಿದ್ದ `ಮೈಸೂರು ಹುಲಿ-193′ ಖ್ಯಾತಿಯ ಕೊಬ್ಬರಿ ಹೋರಿ ಸಾವು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Comments

Leave a Reply

Your email address will not be published. Required fields are marked *