ಸಿಗರೇಟ್ ತಂದು ಕೊಟ್ಟಿಲ್ಲವೆಂದು ಯುವಕನ ಮೇಲೆ ಹಲ್ಲೆ

ಬೆಂಗಳೂರು: ಸಿಗರೇಟ್ ತಂದು ಕೊಡಲಿಲ್ಲ ಎಂದು ಕುಡಿದ ಮತ್ತಿನಲ್ಲಿ ಪುಡಿ ರೌಡಿಗಳು ಯುವಕನ ಮೇಲೆ ಹಲ್ಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಈ ಘಟನೆ ಯಲಹಂಕದ ವಿಐಟಿ ಕ್ರಾಸ್ ಬಳಿಯ ಡಾಬಾದಲ್ಲಿ ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಪುಡಿ ರೌಡಿಗಳ ಹಲ್ಲೆಯ ದೃಶ್ಯ ಡಾಬಾದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಊಟ ಪಾರ್ಸಲ್ ತೆಗೆದುಕೊಳ್ಳಲು ಬಂದಿದ್ದ ಯುವಕನ ಮೇಲೆ 10 ಜನ ಪುಡಿ ರೌಡಿಗಳು ಹಲ್ಲೆ ಮಾಡಿದ್ದಾರೆ. ಈ ವೇಳೆ ಯುವಕ ಬಿಟ್ಟುಬಿಡಿ ಎಂದು ಕಾಲಿಗೆ ಬಿದ್ದು ಕೇಳಿಕೊಂಡರೂ ಮೃಗಗಳಂತೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ರಾಡ್ ಮತ್ತು ಕುರ್ಚಿಯಿಂದ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದಾಗಿ ತಲೆಗೆ ತೀವ್ರ ಗಾಯಗೊಂಡು ಯುವಕ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *