ಪ್ರೇಮಿ ಜೊತೆ ಮುನಿಸಿಕೊಂಡು ಮರವೇರಿದ ಪ್ರಿಯಕರ

ಮೈಸೂರು: ಪ್ರೇಮಿ ಜೊತೆ ಸಿಟ್ಟಾದ ಪ್ರಿಯಕರನೊಬ್ಬ ಮರ ಏರಿ ಆತ್ಮಹತ್ಯೆ ಯತ್ನಿಸಿದ ಘಟನೆ ಮೈಸೂರಿನ ದೇವರಾಜ ಮೊಹಲ್ಲಾದಲ್ಲಿ ನಡೆದಿದೆ.

ವಿನಯ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮರ ಏರಿದ ಪ್ರಿಯಕರ. ವಿನಯ್ ಮೂಲತಃ ಕಲಬುರಗಿ ಜಿಲ್ಲೆಯವನಾಗಿದ್ದು, ಕಲಬುರಗಿಯಿಂದ ಮೈಸೂರಿಗೆ ಬಂದಿದ್ದನು. ಬಳಿಕ ಮೈಸೂರಿನಲ್ಲಿ ಓದುತ್ತಿದ್ದ ಯುವತಿಯನ್ನು ಪ್ರೀತಿಸಿದ್ದಾನೆ. ಪ್ರೀತಿಯಲ್ಲಿ ಬಿರುಕು ಮೂಡಿದ ಕಾರಣ ಇಂದು ವಿನಯ್ ಮರವೇರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಈ ವಿಷಯ ತಿಳಿದ ದೇವರಾಜ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಬಳಿಕ ಪ್ರಿಯಕರ ವಿನಯ್ ಮನವೊಲಿಸಿ ಕೆಳಗೆ ಇಳಿಸಿದ್ದಾರೆ. ಸದ್ಯ ವಿನಯ್ ಹಾಗೂ ಆತನ ಪ್ರಿಯತಮೆಯನ್ನು ಪೊಲೀಸರು ದೇವರಾಜ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *