ಐಪಿಎಲ್‍ನಿಂದಾಗಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ!

ಬೆಂಗಳೂರು: ಐಪಿಎಲ್ ಬೆಟ್ಟಿಂಗ್ ಕಟ್ಟಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಚ್.ಎಸ್.ಆರ್ ಲೇಔಟ್ ಬಳಿಯಿರುವ ಹೊಟೇಲ್ ಪ್ರಶಾಂತ್ ನಲ್ಲಿ ನಡೆದಿದೆ.

ಯೋಗೀಶ್ (30) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಯೋಗೀಶ್ ರೂಪೇನ ಆಗ್ರಹಾರದ ನಿವಾಸಿಯಾಗಿದ್ದು, ಹೆಚ್.ಎಸ್.ಆರ್ ಲೇಔಟ್ ಬಳಿಯಿರುವ ಹೊಟೇಲ್ ಪ್ರಶಾಂತ್ ನಲ್ಲಿ ಒಂದು ರೂಮು ಬಾಡಿಗೆ ಪಡೆದು ಅಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಧ್ಯಾಹ್ನ ಸುಮಾರು 12.30ಕ್ಕೆ ನೇಣಿಗೆ ಶರಣಾಗಿದ್ದಾನೆ. ಐಪಿಎಲ್ ಬೆಟ್ಟಿಂಗ್ ಚಟಕ್ಕೆ ಬಿದ್ದು ಲಕ್ಷಾಂತರ ರೂ. ಗಳನ್ನು ಕಳೆದುಕೊಂಡು ಮಾನಸಿಕವಾಗಿ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಸದ್ಯ ಈ ಬಗ್ಗೆ ಮಡಿವಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Comments

Leave a Reply

Your email address will not be published. Required fields are marked *