ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಎಸ್‍ವೈ ಮನೆಗೆ ಮುತ್ತಿಗೆ

ಶಿವಮೊಗ್ಗ: ಭಾನುವಾರದಂದು ಬಳ್ಳಾರಿಯಲ್ಲಿ ಶ್ರೀರಾಮುಲು ನಿವಾಸಕ್ಕೆ ಮುತ್ತಿಗೆ ಹಾಕಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರು ಇವತ್ತು ಶಿವಮೊಗ್ಗದ ವಿನೋಬಾ ನಗರದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮನೆಗೆ ಮುತ್ತಿಗೆ ಹಾಕಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ ಸಾಲ ಮನ್ನಾ ಮಾಡಿಸಲು ಆಗ್ರಹಿಸಿದ ಕಾರ್ಯಕರ್ತರು, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಲು ಸಂಸದರು ವಿಫಲರಾಗಿದ್ದಾರೆ ಅಂತ ಆಕ್ರೋಶ ವ್ಯಕ್ತಪಡಿಸಿದ್ರು. ಆದ್ರೆ ಮುತ್ತಿಗೆ ಹಾಕ್ತಿದ್ದಂತೆ ಪೊಲೀಸರು ಸುಮಾರು 25ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರನ್ನ ಬಂಧಿಸಿ ಬಿಡುಗಡೆ ಮಾಡಿದ್ರು.

ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ ವೇಳೆ ಯಡಿಯೂರಪ್ಪ ಬೆಂಗಳೂರಿನ ಮನೆಯಲ್ಲಿದ್ದರು.

Comments

Leave a Reply

Your email address will not be published. Required fields are marked *