ಅಪರಿಚಿತ ವಾಹನ ಡಿಕ್ಕಿಯಾಗಿ ಯುವಕನ ತಲೆ ಛಿದ್ರ!

ಮೈಸೂರು: ಅಪರಿಚಿತ ವಾಹನ ಬೈಕ್ ಸವಾರನಿಗೆ ಡಿಕ್ಕಿಯಾದ ಪರಿಣಾಮ ನಡುರಸ್ತೆಯಲ್ಲಿ ಯುವಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಘಟನೆ.

ದ್ರುಪದ್ ಯಾದವ (25) ಮೃತ ದುರ್ದೈವಿಯಾಗಿದ್ದು, ಕೃಷಿ ಪಶುಪಾಲನೆಯನ್ನ ವೃತ್ತಿಯನ್ನಾಗಿಸಿಕೊಂಡು ಜೀವನ ನಡೆಸುತ್ತಿದ್ದರು. ಆದರೆ ರಾತ್ರಿ ಪಿರಿಯಾಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿ ಬೈಕ್ ಮೇಲೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿದ್ದು, ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ದ್ರುಪದ್ ಪಿರಿಯಾಪಟ್ಟಣದ ಐಚನಹಳ್ಳಿ ನಿವಾಸಿಯಾಗಿದ್ದು, ವಾಹನ ಡಿಕ್ಕಿ ಹೊಡೆದ ರಭಸಕ್ಕೆ ತಲೆ ಭಾಗ ಛಿದ್ರವಾಗಿದೆ. ಅಪಘಾತ ನಡೆಯುತ್ತಿದಂತೆ ಅಪರಿಚಿತ ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳೀಯರ ಮಾಹಿತಿಗೆ ಮೇರೆಗೆ ಸ್ಥಳಕ್ಕೆ ಆಗಮಿಸಿದ ಹುಣಸೂರು ಪೊಲೀಸರು ಮೃತ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದು, ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Comments

Leave a Reply

Your email address will not be published. Required fields are marked *