ಗಣೇಶ ವಿಸರ್ಜನೆ ವೇಳೆ ಕಾಲು ಜಾರಿ ನದಿಯಲ್ಲಿ ಬಿದ್ದು ಯುವಕ ಸಾವು

ಬಾಗಲಕೋಟೆ: ಗಣೇಶ ವಿಸರ್ಜನೆ ವೇಳೆ ಕಾಲು ಜಾರಿ ನದಿಯಲ್ಲಿ ಬಿದ್ದು ಯುವಕ ಸಾವನ್ನಪಪ್ಪಿರುವ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಲಕ್ಣನಟ್ಟಿ ಗ್ರಾಮದಲ್ಲಿ ನಡೆದಿದೆ.

ಜ್ಞಾನೇಶ್ ಮಾಳದ(25) ಮೃತಪಟ್ಟ ಯವಕ. ಜ್ಞಾನೇಶ್ ಗೆಳೆಯರೊಂದಿಗೆ ಗುರುವಾರ ರಾತ್ರಿ ತಮ್ಮ ಗ್ರಾಮದ ಏರಿಯಾ ಗಣೇಶ ವಿಸರ್ಜನೆ ಮಾಡಲು ಪಕ್ಕದ ಘಟಪ್ರಭಾ ನದಿಗೆ ತೆರಳಿದ್ರು. ಈ ವೇಳೆ ಜ್ಞಾನೇಶ್ ಕಾಲು ಜಾರಿ ನದಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ.

ವಿಷಯ ತಿಳಿದ ಗ್ರಾಮಸ್ಥರು ಗುರುವಾರ ರಾತ್ರಿಯಿಂದಲೇ ಜ್ಞಾನೇಶ್ ಶವ ಹುಡುಕಾಟ ನಡೆಸಿದ್ದಾರೆ. ಈ ವರೆಗೂ ಆತನ ಶವ ಸಿಕ್ಕಿಲ್ಲ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಹಾಗೂ ನುರಿತ ಈಜುಗಾರರಿಂದ ಜ್ಞಾನೇಶ್ ಶವ ಹುಡುಕಾಟ ನಡೆಸಲಾಗುತ್ತಿದೆ.

ಲೋಕಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಕುರಿತು ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *