ಸಾಗರ ಲಾಡ್ಜ್‌ನಲ್ಲಿ ಇಬ್ಬರು ಯುವಕರ ಆತ್ಮಹತ್ಯೆ

ಶಿವಮೊಗ್ಗ: ಲಾಡ್ಜ್ ನಲ್ಲಿ ಇಬ್ಬರು ಯುವಕರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ.

ಮೃತಪಟ್ಟವರನ್ನು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಹಟ್ಟಿ ಗ್ರಾಮದ ಸಂತೋಷ್ (23) ಮತ್ತು ಹನುಮಂತ (28) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಶರಣಾದ ಸಂತೋಷ್ ಮತ್ತು ಹನುಮಂತ ಇಬ್ಬರು ಶುಕ್ರವಾರ ತಡರಾತ್ರಿ ಲಾಡ್ಜ್‍ಗೆ ಬಂದು ಡಬ್ಬಲ್ ಬೆಡ್ ರೂಂ ಬಾಡಿಗೆಗೆ ಪಡೆದಿದ್ದರು. ಶನಿವಾರ ಮಧ್ಯಾಹ್ನ ಇಬ್ಬರೂ ಹೊರಗೆ ಬಂದು ಊಟ ತೆಗೆದುಕೊಂಡು ರೂಮ್ ಸೇರಿಕೊಂಡಿದ್ದರು ಎನ್ನಲಾಗಿದೆ.

ಶನಿವಾರ ರಾತ್ರಿ 8-30ಕ್ಕೆ ರೂಮ್ ಬಾಯ್ ಊಟ ಏನಾದರೂ ಬೇಕಾ ಎಂದು ಕೇಳಲು ರೂಮ್ ಬಾಗಿಲು ಬಡಿದಿದ್ದಾನೆ. ಆದರೆ ಇಬ್ಬರೂ ಹೊರಗೆ ಬಂದಿರಲಿಲ್ಲ. ರೂಮ್ ಬಾಯ್ ಇಬ್ಬರೂ ಮಲಗಿರಬೇಕು ಎಂದು ವಾಪಾಸ್ ತೆರಳಿದ್ದ. ಇದನ್ನೂ ಓದಿ: ಟಯರ್ ಸ್ಟೋಟವಾಗಿ ಭೀಕರ ಅಪಘಾತ- ಮಗ, ಮಾವ ಸ್ಥಳದಲ್ಲೇ ಸಾವು

ಭಾನುವಾರ ಬೆಳಗ್ಗೆ ಸಹ ರೂಮಿನ ಬಾಗಿಲು ಸಾಕಷ್ಟು ಬಾರಿ ಬಡಿದಾಗಲೂ ಬಾಗಿಲು ತೆರೆಯಲಿಲ್ಲ. ಇದರಿಂದ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲಿ ರೂಮಿನ ಬಾಗಿಲು ಒಡೆದು ನೋಡಿದಾಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಆದರೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *