ಪ್ರೀತಿ ನಿರಾಕರಿಸಿದ ವಿದ್ಯಾರ್ಥಿನಿಗೆ ಚಾಕು ಇರಿದ ಪಾಗಲ್ ಪ್ರೇಮಿ

ಹಾಸನ: ಪ್ರೀತಿ ನಿರಾಕರಿಸಿದಕ್ಕೆ ಸಿಟ್ಟಿಗೆದ್ದ ಪಾಗಲ್ ಪ್ರೇಮಿಯೋರ್ವ ವಿದ್ಯಾರ್ಥಿನಿಗೆ ಚಾಕು ಇರಿದು ಕೌರ್ಯ ಮೆರೆದ ಘಟನೆ ಹಾಸನದಲ್ಲಿ ನಡೆದಿದೆ.

ಹೊಳೆನರಸೀಪುರದ ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿಗೆ ಪಾಗಲ್ ಪ್ರೇಮಿ ಮಣಿಕಂಠ(19) ಚಾಕು ಇರಿದಿದ್ದಾನೆ. ಆರೋಪಿ ಮಣಿಕಂಠ ಅಲಿಯಾಸ್ ಮಲ್ಲೇಶ್ ಪಡವಲಹಿತ್ತೆ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಯಾಗಿದ್ದಾನೆ. ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದ ಮಣಿಕಂಠ ಆಕೆ ಎಷ್ಟೇ ಬಾರಿ ನಿರಾಕರಿಸಿದರೂ ತನ್ನನ್ನು ಪ್ರೀತಿ ಮಾಡು ಎಂದು ಬಹಳ ದಿನಗಳಿಂದ ಪೀಡಿಸುತ್ತಾ ಕಾಟಕೊಡುತ್ತಿದ್ದನು. ಆದರೇ ಏನೇ ಮಾಡಿದರು ವಿದ್ಯಾರ್ಥಿನಿ ತನ್ನ ಪ್ರೀತಿಯನ್ನು ಒಪ್ಪಲಿಲ್ಲ ಎಂಬ ಕೋಪಕ್ಕೆ ಇಂದು ಮಧ್ಯಾಹ್ನ ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಇದನ್ನೂ ಓದಿ:ಮದುವೆಗೆ ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನು ಸುಟ್ಟು ತಾನು ಹೆಣವಾದ

ಪಟ್ಟಣದ ರೈಲು ನಿಲ್ದಾಣ ಬಳಿಯೇ ಯುವತಿಯ ಕಾಲೇಜು ಇರುವುದರಿಂದ ಆಕೆ ಮಧ್ಯಾಹ್ನ ಕ್ಲಾಸ್ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದಳು. ಈ ವೇಳೆ ರೈಲು ನಿಲ್ದಾಣ ಬಳಿ ಆಕೆಯನ್ನು ಅಡ್ಡಗಟ್ಟಿದ ಮಣಿಕಂಠ ಚಾಕುವಿನಿಂದ ಇರಿದು ಆಕೆಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಯುವತಿಯ ಕೈಗೆ ಹಾಗೂ ಕುತ್ತಿಗೆಗೆ ಗಾಯಗಳಾಗಿವೆ. ತಕ್ಷಣ ಆಕೆಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ ಕಾರಣ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಇದನ್ನೂ ಓದಿ:ಪ್ರೀತಿ ನಿರಾಕರಿಸಿದ್ದಕ್ಕೆ ಗುಪ್ತಾಂಗಕ್ಕೆ ಸ್ಕ್ರೂ ಡ್ರೈವರ್‌ನಿಂದ ಇರಿತ – ಐಸಿಯುನಲ್ಲಿದ್ದ ಯುವತಿ ಸಾವು

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಣಿಕಂಠನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Comments

Leave a Reply

Your email address will not be published. Required fields are marked *