ಸಾವು-ಬದುಕಿನ ಹೋರಾಟ ನಡೆಸ್ತಿದ್ದ ಹಸುವಿಗೆ ಯುವಕರಿಂದ ಸಹಾಯ

ಚಿಕ್ಕಮಗಳೂರು: ಅಪಘಾತಕ್ಕೀಡಾಗಿ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಹಸುವೊಂದಕ್ಕೆ ಯುವಕರು ತಾತ್ಕಾಲಿಕ ಶೆಡ್ ನಿರ್ಮಿಸಿ ಚಿಕಿತ್ಸೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿನ ರೇಣುಕಾ ನಗರದಲ್ಲಿ ಅಪಘಾತಕ್ಕೀಡಾದ ಹಸುವೊಂದು ಮೇಲೇಳಲಾಗದೆ ನರಳುತ್ತಿತ್ತು. ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂರು ದಿನಗಳಿಂದ ಹಸುವಿನ ಸ್ಥಿತಿ ಹೀಗೆ ಇದ್ದರೂ ಯಾರೋಬ್ಬರು ಕೂಡ ಹಸುವಿನ ನೆರವಿಗೆ ಮುಂದಾಗಿರಲಿಲ್ಲ.

ಹಸುವಿನ ಮಾಲೀಕರು ಕೂಡ ಬಂದಿರಲಿಲ್ಲ. ಇದನ್ನು ಗಮನಿಸಿದ ಸ್ಥಳೀಯರು ನಾಗರಾಜ್ ಭಟ್, ಅನ್ವರ್, ಜಾರ್ಜ್ ಹಾಗೂ ಸ್ಥಳೀಯ ಯುವಕರು ತಾತ್ಕಾಲಿಕ ಶೆಡ್ ನಿರ್ಮಿಸಿ ಹಸುವಿನ ಚಿಕಿತ್ಸೆ ನೀಡಿ, ಪಶು ವೈದ್ಯರಿಗೆ ವಿಷಯ ಮುಟ್ಟಿಸಿದ್ದಾರೆ.

ಸದ್ಯ ಸ್ಥಳಕ್ಕೆ ಬಂದ ಪಶು ವೈದ್ಯರು ಹಸುವಿಗೆ ಚುಚ್ಚು ಮದ್ದು ನೀಡಿ, ಹಸುವನ್ನು ರಕ್ಷಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *