ಜಮೀರ್ ಅಹ್ಮದ್ ಖಾನ್ ನಮ್ಮ ಪಕ್ಷದ ಬಾಹುಬಲಿ: ಸತೀಶ್ ಜಾರಕಿಹೊಳಿ

ಬೆಳಗಾವಿ: ಜಮೀರ್ ಅಹ್ಮದ್ ಖಾನ್ ಅವರು ನಮ್ಮ ಪಕ್ಷದ ಉನ್ನತ ನಾಯಕ. ಅವರನ್ನು ನೀವು ಎಲ್ಲಾ ರೀತಿಯಿಂದ ಬೆಳೆಸಬೇಕು. ಅವರು ನಮ್ಮ ಪಕ್ಷದ ಬಾಹುಬಲಿ. ತಮ್ಮದೇ ಆದ ಶಕ್ತಿಯನ್ನು ಹೊಂದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಜಮೀರ್ ಅಹ್ಮದ್ ಖಾನ್ ಅವರನ್ನು ಹೊಗಳಿದರು.

ನಗರದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರ ಚಿಂತನಾ ಸಭೆಯಲ್ಲಿ ಮಾತನಾಡಿದ ಅವರು, ಆಗಸ್ಟ್ 3 ರಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬವನ್ನು ದಾವಣಗೆರೆಯಲ್ಲಿ ಮಾಡುತ್ತಿದ್ದೇವೆ. ಬೆಂಗಳೂರಿನಿಂದ ನಮಗೆ ಆಹ್ವಾನ ನೀಡಲು ಜಮೀರ್ ಬಂದಿದ್ದಾರೆ. ನಮ್ಮ ಪಕ್ಷದ ಉನ್ನತ ನಾಯಕ ಜಮೀರ್ ಅಹ್ಮದ್ ಎಂದು ಕೊಂಡಾಡಿದರು.

9 ತಿಂಗಳಲ್ಲಿ ಚುನಾವಣೆ ಬರ್ತಾ ಇದೆ. ಈ ಚುನಾವಣೆಯಲ್ಲಿ ನೀವೆಲ್ಲಾ ಒಗ್ಗಟ್ಟಾಗಬೇಕು. ಬರುವ ಚುನಾವಣೆಯಲ್ಲಿ ಗಟ್ಟಿಯಾಗಿರಬೇಕು. ಜಾಫರ್ ಶರೀಫ್ ನಂತರ ಮತ್ತೊಬ್ಬ ಮುಸ್ಲಿಂ ನಾಯಕರಾಗಲು ಜಮೀರ್‌ಗೆ ಅವಕಾಶವಿದೆ. ಎಲ್ಲೇ ಹೋದರೂ 5-10 ಲಕ್ಷ ರೂ. ಜಮೀರ್ ಜೇಬಿನಲ್ಲಿರುತ್ತದೆ. ವಾಪಸ್ ಹೋಗುವಾಗ ಖಾಲಿ ಜೇಬಿನಿಂದ ಹೋಗುತ್ತಾರೆ. ನಾವು ಅಷ್ಟು ಹಣ ಇಟ್ಟುಕೊಳ್ಳುವುದಿಲ್ಲ. ಇಡಿ, ಐಟಿ ನಿಮ್ಮ ಹಿಂದೆ ಬಿದ್ದಿದೆ ಎಂದರೆ ನಿಮ್ಮ ಜೊತೆಗೆ ಪಕ್ಷ ಮತ್ತು ಸಮುದಾಯವಿದೆ. ಮುಂದಿನ ದಿನಗಳಲ್ಲಿ ಅಚ್ಚೇ ದಿನ್ ಬರುತ್ತದೆ. ನೀವು ಕಾಯಬೇಕು ಎಂದರು. ಇದನ್ನೂ ಓದಿ: ವಿಜಯೇಂದ್ರ ಸ್ಪರ್ಧೆ ವಿಚಾರದಲ್ಲಿ ಅಂತಿಮ ನಿರ್ಧಾರ ಕೈಗೊಳ್ಳೋದು ಹೈಕಮಾಂಡ್: ಬಿಎಸ್‍ವೈ

ನಿಮ್ಮ ಶಕ್ತಿ ಕಾಂಗ್ರೆಸ್ ಶಕ್ತಿ. ಎಲ್ಲರೂ ಒಗ್ಗಟ್ಟಾಗಿರಬೇಕು. ಮುಂದಿನ ದಿನಗಳಲ್ಲಿ ಜಮೀರ್ ಅಹ್ಮದ್ ಬೆಳಗಾವಿಗೆ ಆಗಮಿಸುತ್ತಾರೆ. ನಿಮಗೂ ಒಬ್ಬರು ಲೀಡರ್ ಅಂತ ಬೇಕಾಗುತ್ತದೆ. ಹೀಗಾಗಿ ಜಮೀರ್ ಬರ್ತಾರೆ. ಎಲ್ಲಾ ಕಡೆ ಸಭೆಗಳನ್ನು ಮಾಡುತ್ತಾರೆ. ಅಲ್ಪಸಂಖ್ಯಾತ ಸಮುದಾಯದಿಂದ ಜಮೀರ್ ಅಹ್ಮದ್ ನಾವು ಕೂಡ ಮುಖ್ಯಮಂತ್ರಿ ಆಕಾಂಕ್ಷಿ ಎಂದಿದ್ದಾರೆ ಎಂದು ತಿಳಿಸಿದರು.

satish jarkiholi

ನಮಗೂ ಸಾಕಷ್ಟು ಜನ ಕೇಳುತ್ತಾರೆ. ಆದರೆ ನಮ್ಮ ಸರದಿ ಇನ್ನೂ ದೂರ ಇದೆ. ದಿಲ್ಲಿ ಅಬಿ ದೂರ್ ಹೈ. ನಮ್ಮದು ಸಿಎಂ ಕುರ್ಚಿಗಾಗಿ ಲಡಾಯಿ ಇಲ್ಲ. ಈಗ ನಮ್ಮ ಜನರಿಗೆ ಸಮಾನತೆ ಬೇಕಾಗಿದೆ. ಈ ನಿಟ್ಟಿನಲ್ಲಿ ನಮ್ಮ ಹೋರಾಟ ಇದೆ. ಈಗ ನಮ್ಮದು ಕುರ್ಚಿಗಾಗಿ ಫೈಟ್ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರಿ ಈಶ್ವರಪ್ಪಗೆ ಕ್ಲೀನ್ ಚಿಟ್ ಕೊಡಿಸಿದೆ: ಎಎಪಿ

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *