ಸಚಿವ ಖಾದರ್ ಕಾರಿಗೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ

ಮಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಕಾರ್ಯಕರ್ತ ಝುಬೈರ್ ಅವರ ಮನೆಗೆ ಭೇಟಿ ನೀಡದಂತೆ ಆಹಾರ ಸಚಿವ ಯು.ಟಿ ಖಾದರ್ ಅವರನ್ನು ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿರುವ ಘಟನೆ ನಡೆದಿದೆ.

ಖಾದರ್ ಸ್ವಕ್ಷೇತ್ರ ಉಳ್ಳಾಲದ ಮುಕ್ಕಚ್ಚೇರಿಯಲ್ಲಿರುವ ಝುಬೈರ್ ಮನೆಗೆ ಬೇಟಿ ನೀಡಲು ಹೋಗುತ್ತಿದ್ದ ವೇಳೆಯಲ್ಲಿ, ಖಾದರ್ ಇದ್ದ ಕಾರ್‍ಗೆ ಬಿಜೆಪಿ ಕಾರ್ಯಕರ್ತರು ಕಲ್ಲು ಎಸೆದು ಮುತ್ತಿಗೆಹಾಕಿದ್ದಾರೆ. ನಂತರ ಖಾದರ್ ಬೇರೆ ಕಾರಿನಲ್ಲಿ ಹೋಗಿದ್ದಾರೆ.

ಖಾದರ್ ಮಾತನಾಡಿ, ಎಸಿಪಿ ನೇತೃತ್ವದಲ್ಲಿ ರೌಡಿಸಂ ಮಟ್ಟ ಹಾಕಲು ಪ್ರತ್ಯೇಕವಾಗಿ ಎರಡು ತಂಡ ರಚನೆ ಮಾಡಲಾಗಿದೆ. ಉಳ್ಳಾಲ, ಕೊಣಾಜೆ, ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ರಾಜಕೀಯ ಕಾರಣಕ್ಕಾಗಿ ಆರೋಪ ಮಾಡಿ ಪ್ರಯೋಜನ ಇಲ್ಲ ಎಂದು ತಿಳಿಸಿದರು.

ಬುಧವಾರ ಸಂಜೆ ಉಳ್ಳಾಲದ ಮುಕ್ಕಚ್ಚೇರಿ ಮಸೀದಿ ಬಳಿ ಜುಬೇರ್ ಮತ್ತು ಇಲಿಯಾಸ್ ಎಂಬ ಇಬ್ಬರು ನಿಂತಿದ್ದಾಗ ನಾಲ್ವರ ತಂಡ ಮಚ್ಚು ಲಾಂಗ್‍ ಗಳಿಂದ ದಾಳಿ ನಡೆಸಿತ್ತು. ತೀವ್ರವಾಗಿ ಗಾಯಗೊಂಡ ಜುಬೇರ್ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದರು.

Comments

Leave a Reply

Your email address will not be published. Required fields are marked *